ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಕೆ ಐ ಎ ಡಿ ಬಿ ಯಲ್ಲಿ ರೈತರ ಹೆಸರಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಐ ಡಿ ಬಿ ಐ ಮ್ಯಾನೇಜರ್ ಹಾಗೂ ಕ್ಲರ್ಕ್ ಮತ್ತು ತಂದೆಗೆ ಗೊತ್ತಿಲ್ಲದ ಹಾಗೆಯೇ 64 ಲಕ್ಷ ಡ್ರಾ ಮಾಡಿದ್ದ ಮಗನನ್ನು ಬಂಧಿಸಿದ ಬೆನ್ನಲ್ಲೇ ಕೆ ಐ ಎ ಡಿ ಬಿ ಯ ಮ್ಯಾನೇಜರ್ ಎಂ.ಕೆ. ಸಿಂಪಿಯ ಬಂಧನದ ನಂತರ ಇದೀಗ ಸಿಐಡಿ ಅಧಿಕಾರಿಗಳ ತಂಡ ನಿವೃತ್ತ ವಿಶೇಷ ಭೂ ಸ್ವಾಧೀನ ಅಧಿಕಾರಿ ವಸಂತಕುಮಾರ ಸಜ್ಜನ ಅಲಿಯಾಸ್ ವಿ.ಡಿ.ಸಜ್ಜನನನ್ನು ಬಲೆಗೆ ಕೆಡುವುದರಲ್ಲಿ ಯಶಸ್ವಿಯಾಗಿದ್ದಾರೆ.
ಆ ಮೂಲಕ ಬಂಧಿತರ ಸಂಖ್ಯೆ ಈಗ ಐದಕ್ಕೆ ಏರಿಕೆಯಾಗಿದೆ.
ವಿ.ಡಿ. ಸಜ್ಜನ ಈ ಪ್ರಕರಣದ ಎ 1 ಆರೋಪಿಯಾಗಿದ್ದಾರೆ.
ಇದೀಗ ಸಿಐಡಿಯು ಐದನೇ ಆರೋಪಿಯನ್ನಾಗಿಸಿ ಬಂಧಿಸಿ ವಿ.ಡಿ. ಸಜ್ಜನರನ್ನು ಕಂಬಿಯ ಹಿಂದೆ ತಳ್ಳಿದೆ.
ಕೆ ಐ ಎ ಡಿ ಬಿಯ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮ್ಯಾನೇಜರ್ ಎಂ.ಕೆ. ಸಿಂಪಿ, ಹಿರಿಯ ಸಹಾಯಕ ಶಂಕರ್ ತಳವಾರ ಹಾಗೂ ಎಜೆಂಟ್ ಅಶ್ಫಕ್ ದುಂಡಸಿಯನ್ನು ಇತ್ತೀಚೆಗೆ ಸಿಐಡಿ ಅಧಿಕಾರಿಗಳು ದಿನವೀಡಿ ಡ್ರೀಲ್ ಮಾಡಿ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದರು.
ಅದರ ಬೆನ್ನಲ್ಲೇ ಕೆ ಐ ಎ ಡಿ ಬಿ ವಿ.ಡಿ. ಸಜ್ಜನನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದರು.
ಈ ಪ್ರಕರಣದ ಸಿ ಐ ಡಿ ತನಿಖೆ ನಡೆಸಲು ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ಒತ್ತಾಯಿಸಿ, ಸಿಎಂ ಹಾಗೂ ಲೋಕಾಯುಕ್ತರ ಮುಂದೆ ದೂರು ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.