ಧಾರವಾಡ prajakiran.com : ಇಲ್ಲಿಯ ಕುಮಾರೇಶ್ವರ ನಗರದ ನಿವಾಸಿಯಾಗಿದ್ದ ನಿವೃತ್ತ ಶಿಕ್ಷಕಿ ಶಕುಂತಲಾ ಆರಾಧ್ಯಮಠ (74) ಶುಕ್ರವಾರ ಬೆಳಗಿನ ಜಾವ ವಿಧಿವಶರಾದರು.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು.
ಅವರು ಪತಿ ಡಾ.ವಿ.ಎಸ್. ಆರಾಧ್ಯಮಠ, ಪುತ್ರ ವೀರೇಶ ಆರಾಧ್ಯಮಠ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.