ಧಾರವಾಡ prajakiran.com : ಗಂಡ ಹೆಂಡತಿಯ ಜಗಳದ ನಡುವೆ ಕೂಸು ಬಡವಾಯಿತು ಎಂಬಂತೆ ಮಗುವೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಇದರಿಂದಾಗಿ ಹತ್ತು ತಿಂಗಳ ಮಗುವೊಂದು ಬಾರದ ಲೋಕಕ್ಕೆ ಹೋಗಿದೆ.
ಧಾರವಾಡ ತಾಲೂಕಿನ ಗೊಂಗಡಿಕೊಪ್ಪದಲ್ಲಿ ಈ ಘಟನೆ ನಡೆದಿದೆ.
ತನ್ವೀರ್ ಎಂಬ ಹತ್ತು ತಿಂಗಳ ಮಗು ಸಾವಿಗೀಡಾಗಿದ್ದು, ಮಗುವಿನ ತಂದೆ, ತಾಯಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ.
ಅಸ್ವಸ್ಥಗೊಂಡ ಮಗುವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆ ತರಲಾಗಿತ್ತು. ಆದರೆ, ಮಗು ಚಿಕಿತ್ಸೆಗೆ ಸ್ಪಂದಿಸದ ಇಹಲೋಕ ತ್ಯಜಿಸಿದೆ.
ಮಗುವಿಗೆ ವಿಷ ಉಣಿಸಿರಬಹುದು ಎಂದು ಗಂಡ ಹೆಂಡತಿಯ ಮೇಲೆಯೇ ಅನುಮಾನ ವ್ಯಕ್ತಪಡಿಸುತ್ತಿದ್ದಾನೆ.
ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಪೊಲೀಸರು ಮರಣೋತ್ತರ ಪರೀಕ್ಷೆ ವರದಿಯನ್ನ ಎಫ್ಎಸ್ಎಲ್ಗೆ ಕಳುಹಿಸಲು ನಿರ್ಧರಿಸಿದ್ದು, ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.
ಸದ್ಯ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಇದನ್ನು ಅಸಹಜ ಸಾವು ಎಂದು ದಾಖಲಿಸಿಕೊಂಡಿದ್ದಾರೆ.