ಅಪರಾಧ

ಧಾರವಾಡದಲ್ಲಿ ಗಂಡ ಹೆಂಡತಿ ಜಗಳದ ನಡುವೆ ಹತ್ತು ತಿಂಗಳ ಮಗು ಅಸಹಜ ಸಾವು…..!

ಧಾರವಾಡ prajakiran.com : ಗಂಡ ಹೆಂಡತಿಯ ಜಗಳದ ನಡುವೆ ಕೂಸು ಬಡವಾಯಿತು ಎಂಬಂತೆ ಮಗುವೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಇದರಿಂದಾಗಿ ಹತ್ತು ತಿಂಗಳ ಮಗುವೊಂದು ಬಾರದ ಲೋಕಕ್ಕೆ ಹೋಗಿದೆ.

ಧಾರವಾಡ ತಾಲೂಕಿನ ಗೊಂಗಡಿಕೊಪ್ಪದಲ್ಲಿ ಈ ಘಟನೆ ನಡೆದಿದೆ.

ತನ್ವೀರ್ ಎಂಬ ಹತ್ತು ತಿಂಗಳ ಮಗು ಸಾವಿಗೀಡಾಗಿದ್ದು, ಮಗುವಿನ ತಂದೆ, ತಾಯಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ.

ಅಸ್ವಸ್ಥಗೊಂಡ ಮಗುವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆ ತರಲಾಗಿತ್ತು. ಆದರೆ, ಮಗು ಚಿಕಿತ್ಸೆಗೆ ಸ್ಪಂದಿಸದ ಇಹಲೋಕ ತ್ಯಜಿಸಿದೆ.

ಮಗುವಿಗೆ ವಿಷ ಉಣಿಸಿರಬಹುದು ಎಂದು ಗಂಡ ಹೆಂಡತಿಯ ಮೇಲೆಯೇ ಅನುಮಾನ ವ್ಯಕ್ತಪಡಿಸುತ್ತಿದ್ದಾನೆ‌.

ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪೊಲೀಸರು ಮರಣೋತ್ತರ ಪರೀಕ್ಷೆ ವರದಿಯನ್ನ ಎಫ್‌ಎಸ್ಎಲ್‌ಗೆ ಕಳುಹಿಸಲು ನಿರ್ಧರಿಸಿದ್ದು, ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

ಸದ್ಯ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಇದನ್ನು ಅಸಹಜ ಸಾವು ಎಂದು ದಾಖಲಿಸಿಕೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *