ರಾಜ್ಯ

ಧಾರವಾಡದ ಮಾಜಿ ಸಚಿವ ಎಸ್. ಆರ್‌. ಮೋರೆ‌ ಇನ್ನಿಲ್ಲ

 ಧಾರವಾಡ prajakiran.com : ಮಾಜಿ ಸಚಿವ ಎಸ್ ಆರ್‌. ಮೋರೆ‌ ನಿಧನ ಹೊಂದಿದರು.

 ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಎಸ್ ಡಿ‌ ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಇಹಲೋಕ ತ್ಯಜಿಸಿದರು.

ನಾಲ್ಕು ಬಾರಿ ಧಾರವಾಡದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದ ಮೋರೆ ಅವರು

ಬಂಗಾರಪ್ಪ ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದ‌ರು.

ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿದ್ದರೆ, ಧರ್ಮಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ‌ರು.

ಎಸ್ ಆರ್ ಮೋರೆ ಅವರಿಗೆ ಮೂವರು ಪುತ್ರಿಯರು, ಒಬ್ಬರು ಅಮೇರಿಕಾದಲ್ಲಿ, ಇನ್ನೊಬ್ಬರು ಪೋನಾದಲ್ಲಿ ಹಾಗೂ ಕೊನೆಯದವರು ಬೆಂಗಳೂರು ದಲ್ಲಿ ವಾಸವಾಗಿದ್ದಾರೆ.

ಎಸ್.ಆರ್‌. ಮೊರೆ ಅವರು ಕಳೆದ ನಾಲ್ಕು ದಶಕಗಳಿಂದ ಧಾರವಾಡ ಜಿಲ್ಲೆಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳೆಯದಲ್ಲಿ ಪ್ರಭಾವಿ ರಾಜಕಾರಣಿಯಾಗಿದ್ದು, ಅವರ ಗರಡಿಯಲ್ಲಿ ನೂರಾರು ಕಾಂಗ್ರೆಸ್ ನಾಯಕರು ತಯಾರಾಗಿದ್ದರು.

ಮರಾಠ ಸಮಾಜದಲ್ಲಿ ತಮ್ಮದೆ ಆದ ಛಾಪು ಮೂಡಿಸಿದ್ದ ಅವರು ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಹಾಗೂ ವಿಶೇಷವಾಗಿ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರ ಕೊಡಿಸಿದ ಹಿರಿಮೆ ಹೊಂದಿದ್ದಾರೆ.

ಅವರ ಅಗಲಿಕೆ ಧಾರವಾಡ ಜಿಲ್ಲೆಗೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದರೆ ತಪ್ಪಾಗಲಾರದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *