ಉತ್ತರಕನ್ನಡ prajakiran.com : ಸಮೋಸಾ ಗಂಟಲಲ್ಲಿ ಸಿಲುಕಿ ಬಿಕ್ಕುವೊಬ್ಬ ಸಾವನ್ನಪ್ಪಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಜಿಲ್ಲೆಯ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ಸೋಮವಾರ ಮಂಗೋಲಿಯಾ ದೇಶದ ಬಯಾರ್ಜವಖ್ಲನ್ ದಾಶ್ದೋರ್ಜ (18) ಎಂಬ ಬಿಕ್ಕು ಮೃತಪಟ್ಟಿದ್ದಾನೆ.
ಇತ ತನ್ನ ಕೊಠಡಿಯಲ್ಲಿ ಸಮೋಸಾ ತಿನ್ನುವಾಗ ಅದು ಗಂಟಲಿನಲ್ಲಿ ಸಿಗಿ ಬಿದ್ದಿದೆ. ಇದರಿಂದ ಆತನಿಗೆ ತಕ್ಷಣ ಉಸಿರಾಡಲು ತೊಂದರೆ ಆಗಿ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.
ಈ ದುರ್ಘಟನೆ ಸಂಭವಿಸುತ್ತಿದ್ದಂತೆ ಉಳಿದ ಬೌದ್ದ ಬಿಕ್ಕುಗಳು ಗಾಬರಿಗೊಂಡು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ.
ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ನಂ.2ರ ಗೋಮಾಂಗ್ ವಸತಿ ನಿಲಯದಲ್ಲಿ ಕಳೆದ ಹಲವು ದಿನಗಳಿಂದ ವಾಸವಿದ್ದರು ಎಂದು ಹೇಳಲಾಗುತ್ತಿದೆ.
ಬಿಕ್ಕಳಿಕೆ ಬಂದು ಉಸಿರಾಡಲು ತೊಂದರೆ ಪಟ್ಟು ಮೃತಪಟ್ಟಿದ್ದಾರೆ ಎಂದು ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.