ಅಂತಾರಾಷ್ಟ್ರೀಯ

ಮುಂಡಗೋಡದಲ್ಲಿ ಗಂಟಲಿನಲ್ಲಿ ಸಮೋಸಾ ಸಿಲುಕಿ ಬಿಕ್ಕು ಸಾವು




ಉತ್ತರಕನ್ನಡ prajakiran.com :  ಸಮೋಸಾ ಗಂಟಲಲ್ಲಿ ಸಿಲುಕಿ  ಬಿಕ್ಕುವೊಬ್ಬ ಸಾವನ್ನಪ್ಪಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಜಿಲ್ಲೆಯ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ಸೋಮವಾರ ಮಂಗೋಲಿಯಾ ದೇಶದ ಬಯಾರ್ಜವಖ್ಲನ್ ದಾಶ್ದೋರ್ಜ (18) ಎಂಬ ಬಿಕ್ಕು ಮೃತಪಟ್ಟಿದ್ದಾನೆ.




ಇತ ತನ್ನ ಕೊಠಡಿಯಲ್ಲಿ ಸಮೋಸಾ ತಿನ್ನುವಾಗ ಅದು ಗಂಟಲಿನಲ್ಲಿ ಸಿಗಿ ಬಿದ್ದಿದೆ. ಇದರಿಂದ ಆತನಿಗೆ ತಕ್ಷಣ ಉಸಿರಾಡಲು ತೊಂದರೆ ಆಗಿ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.

ಈ ದುರ್ಘಟನೆ ಸಂಭವಿಸುತ್ತಿದ್ದಂತೆ ಉಳಿದ ಬೌದ್ದ ಬಿಕ್ಕುಗಳು ಗಾಬರಿಗೊಂಡು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ. 




ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ನಂ.2ರ ಗೋಮಾಂಗ್ ವಸತಿ ನಿಲಯದಲ್ಲಿ ಕಳೆದ ಹಲವು ದಿನಗಳಿಂದ ವಾಸವಿದ್ದರು ಎಂದು ಹೇಳಲಾಗುತ್ತಿದೆ.

ಬಿಕ್ಕಳಿಕೆ ಬಂದು ಉಸಿರಾಡಲು ತೊಂದರೆ ಪಟ್ಟು ಮೃತಪಟ್ಟಿದ್ದಾರೆ  ಎಂದು ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *