ರಾಜ್ಯ

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಅಧಿಕಾರಿಗಳ ದಿಢೀರ್ ಭೇಟಿ

ಸವದತ್ತಿ prajakiran.com :
ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನಕ್ಕೆ ದಿಢೀರ್ ಭೇಟಿ ನೀಡಿ ಕೆಲ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ದೇವಸ್ಥಾನದ ಮೀಟಿಂಗ್ ಹಾಲ್ ನಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳು, ದೇವಸ್ಥಾನದ ಸಿಬ್ಬಂದಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮುಜರಾಯಿ ಇಲಾಖೆಗೆ ಸಂಬಂಧಿಸಿದ ಭೂ ದಾಖಲಾತಿ ಅಧಿಕಾರಿಗಳಾದ ಜಯ ಪ್ರಕಾಶ ಅವರು ಅಧಿಕಾರಿಗಳೊಂದಿಗೆ ದೇವಾಲಯದ ಆಸ್ತಿಗೆ ಸಂಬಂಧಿಸಿದ ಖರ್ಚು-ವೆಚ್ಚದ ವಿವರ, ದಾಖಲಾತಿ ಮತ್ತು ಸರ್ವೇ ಕುರಿತು ವಿಚಾರಿಸಿದ್ದಾರೆಂದು ತಿಳಿದುಬಂದಿದೆ.

ದೇವಸ್ಥಾನದ ಆವರಣದಲ್ಲಿ ಸಸಿ ನೆಟ್ಟು ಹಸರೀಕರಣಕ್ಕೆ ಅವಕಾಶ ನೀಡುವಂತೆ ಸೂಚಿಸಿ ಜೊತೆಗೆ ದೇವಸ್ಥಾನದಲ್ಲಿ ಸದ್ಯ ನಡೆಯುತ್ತಿರುವ ಪಿಡಬ್ಯುಡಿ ಮತ್ತು ಕೆಆರ್ ಐಡಿಎಲ್ ಇಲಾಖೆಯ ಕಾಮಗಾರಿಗಳ ಕುರಿತು ವಿಚಾರಿಸಿದ್ದಾರೆ.

ನಂತರ ಸಿಬ್ಬಂದಿ ಮಾಹಿತಿ ಪಡೆದ ಅವರು ಪ್ರತಿ ಸಂಕೀರ್ಣ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ದೇವಸ್ಥಾನ ಆಸ್ತಿಯ ಹಸರೀಕರಣ, ನೀರಿನ ಸಮಸ್ಯೆ, ತ್ಯಾಜ್ಯ ವಿಲೇವಾರಿ, ಭೂ ದಾಖಲಾತಿಯ ಪರಿಶೀಲನೆ ಬಗ್ಗೆ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ಈ ಸಭೆಯಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೊಟಾರಗಸ್ತಿ. ಸವದತ್ತಿ ತಹಸೀಲ್ದಾರ ಪ್ರಶಾಂತ ಪಾಟೀಲ್. ಯರಗಟ್ಟಿ ತಹಶಿಲ್ದಾರ ಎಮ್ ಎನ್ ಮಠದ. ಪಿಡಬ್ಯುಡಿ ಅಧಿಕಾರಿ ಖದ್ರಾಪೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ದೇವಸ್ಥಾನದ ಸಿಬ್ಬಂದಿಗಳು ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *