ಬೆಳಗಾವಿ prajakiran.com : ಉತ್ತರ ಕರ್ನಾಟಕದ ಸುಪ್ರಸಿದ್ಧ ದೇವಸ್ಥಾನ ಗಳಾದ ಸವದತ್ತಿ ರೇಣುಕಾ ಯಲ್ಲಮ್ಮ , ಹಾಗೂ ರಾಯಭಾಗದ ಚಿಂಚಲಿ ಮಾಯಮ್ಮ ದೇವಸ್ಥಾನವೂ ತಕ್ಷಣಕ್ಕೆ ಓಪನ್ ಆಗಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿಗಳು ತಿಳಿಸಿವೆ.
ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನವನ್ನು ಜೂನ್ 30ರ ವರೆಗೆ ಓಪನ್ ಆಗಲ್ಲ ಎಂದು ದೇವಸ್ಥಾನ ಸಿಇಒ ರವಿ ಕೋಟಾರಗಸ್ತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಜೂನ್ 30ರ ವರೆಗೂ ಸಾರ್ವಜನಿಕರಿಗೆ ಯಲ್ಲಮ್ಮ ದೇವಸ್ಥಾನ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಮಹಾರಾಷ್ಟ್ರ ಸೇರಿ ಅನ್ಯ ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ಮಹಾರಾಷ್ಟ್ರ ಸೇರಿ ಅನ್ಯ ರಾಜ್ಯದಲ್ಲಿ ಕರೊನಾ ಕೇಸ್ ಹೆಚ್ಚಾಗಿವೆ.
ಹೀಗಾಗಿ ಭಕ್ತರ ಸುರಕ್ಷತೆಯ ಹಿತದೃಷ್ಟಿಯಿಂದ ದೇವಸ್ಥಾನ ಓಪನ್ ಮಾಡದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಜೂನ್ 30 ರ ನಂತರ ದೇವಿ ದರ್ಶನದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ರವಿ ಕೋಟಾರಗಸ್ತಿ ವಿವರಿಸಿದ್ದಾರೆ.