ನಿನ್ನೇ ಒಂದೇ ದಿನ 142 ಪ್ರಕರಣ ಪತ್ತೆ
ಒಟ್ಟು ಸೋಂಕಿತರ ಸಂಖ್ಯೆ 442ಕ್ಕೆ ಏರಿಕೆ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಹಾವಳಿ ಹೆಚ್ಚುತ್ತಲೇ ಇದೆ.
ನಿನ್ನೇ ಒಂದೇ ದಿನ ಬರೋಬ್ಬರಿ 142 ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ
ಒಟ್ಟು ಸೋಂಕಿತರ ಸಂಖ್ಯೆ 442ಕ್ಕೆ ಏರಿಕೆಯಾಗಿದೆ.
ಧಾರವಾಡ ತಾಲೂಕಿನ ಅಮ್ಮಿನಬಾವಿಯ
ಶ್ರೀ ಶಾಂತೇಶ್ವರ ಪ್ರೌಢಶಾಲೆಯ ಹಲವಾರು ಮಕ್ಕಳಿಗೆ ಕರೋನಾ ದೃಢಪಟ್ಟಿದೆ.
ಹೀಗಾಗಿ ಶಾಲೆಯನ್ಬು ಸೀಲ್ ಡೌನ್ ಮಾಡಲಾಗಿದೆ ಎಂದು ಧಾರವಾಡ ತಾಲೂಕಿನ ಬಿಇಒ ಉಮೇಶ್ ಬೊಮ್ಮಕ್ಕನವರ್ ಪ್ರಜಾಕಿರಣ.ಕಾಮ್ ಗೆ ಖಚಿತ ಪಡಿಸಿದರು.
ಇದಲ್ಲದೆ, ಧಾರವಾಡದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ವಸತಿ ನಿಲಯದ ಮಕ್ಕಳಿಗೆ ಕೂಡ ಕರೋನಾ ದೃಢಪಟ್ಟಿದೆ.
ಹದಿಮೂರು ವಿದ್ಯಾರ್ಥಿಗಳು ಕರೋನಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಲ್ಲದೆ, ಹಾಸ್ಡೆಲ್ ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲೆಯ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಗೋಪಾಲ ಲಮಾಣಿ ಪ್ರಜಾಕಿರಣ.ಕಾಮ್ ಗೆ ತಿಳಿಸಿದರು.
ಇದರೊಂದಿಗೆ ಶಾಲಾ ಶಿಕ್ಷಕರಿಗೆ ಹಾಗೂ ವಿಶೇಷವಾಗಿ ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕರೋನಾ ವೇಗವಾಗಿ ಹರಡುತ್ತಿರುವುದು ಪಾಲಕರಿಗೆ ಹಾಗೂ ಶಿಕ್ಷಣ ಇಲಾಖೆಗೆ ಆತಂಕ ಮೂಡಿಸಿದೆ.