ಹಿಜಾಬ್ ವಿವಾದ ಪರಿಸ್ಥಿತಿ ತಿಳಿಗೊಳಿಸಲು ಯತ್ನ
ನವದೆಹಲಿ prajakiran.com ಫೆಬ್ರವರಿ 8-
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಪ್ರೌಢಶಾಲೆ-ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ರಜೆ ಘೋಷಿಸಿದ್ದಾರೆ.
ಅವರು ಮಂಗಳವಾರ ನವದೆಹಲಿಯಲ್ಲಿ ಈ ಆದೇಶ ನೀಡಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ.
ಅಲ್ಲದೆ, ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಜೊತೆಗೆ ಈ ಕುರಿತು ಯಾರೊಬ್ಬರು ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಹೈಕೋರ್ಟ್ ನಿರ್ದಶನಕ್ಕಾಗಿ ಕಾಯುತ್ತಿದೆ. ಅದರ ನಿರ್ದೇಶನ ದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇವೇಳೆ ಹಿಜಾಬ್ ಕುರಿತಾದ ಅರ್ಜಿ ವಿಚಾರಣೆಯನ್ನು ರಾಜ್ಯದ ಹೈಕೋರ್ಟ್ ನಾಳೆಗೆ ಅಂದರೆ ಬುಧವಾರ ಮಧ್ಯಾಹ್ನಕ್ಕೆ ಮುಂದೂಡಿದೆ.