ರಾಜ್ಯದಲ್ಲಿ ಮತ್ತೆ ಆರಂಭವಾಗಲಿವೆ ಶಾಲೆಗಳು
ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಗೆ ಕೈಗೊಳ್ಳಬಹುದಾದಂತ ಅಗತ್ಯ ಕ್ರಮಗಳ ಕುರಿತಂತೆ ರಾಜ್ಯ ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯು ಮಧ್ಯಂತರ ವರದಿ ಸಲ್ಲಿಸಿದೆ.
ಈ ವರದಿಯಲ್ಲಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಉನ್ನತ ಶಿಕ್ಷಣ ಆರಂಭಕ್ಕೆ ಚಿಂತನೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.
3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ತೊಂದರೆ ಇದೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಮಕ್ಕಳ ಆಸ್ಪತ್ರೆ, ತೀವ್ರ ನಿಗಾ ಘಟಕ ಸ್ಥಾಪನೆ, ಮೆಡಿಕಲ್ ಕಾಲೇಜು, ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಹಾರೈಕೆ ಕೇಂದ್ರಗಳ ಬಗ್ಗೆ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದೇನೆ.
ಮೂರು ಹಂತಗಳಲ್ಲಿ ಚಿಕಿತ್ಸೆ ನೀಡಲು ಶಿಪಾರಸ್ಸು ಮಾಡಲಾಗಿದೆ. ಮಕ್ಕಳಿಗಾಗಿಯೇ 250 ಬೆಡ್ ಗಳ ಆಸ್ಪತ್ರೆಯ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.
ಆನ್ ಲೈನ್ ಶಿಕ್ಷಣ ನಿರೀಕ್ಷಿತ ಮಟ್ಟವನ್ನು ತಲುಪುವಲ್ಲಿ ವಿಫಲವಾಗಿದೆ. ಶಾಲಾ ಆರಂಭಕ್ಕೆ ವಿಳಂಭಮಾಡಿದರೆ ಬಾಲಕಾರ್ಮಿಕ ಪದ್ಧತಿ, ಮಕ್ಕಳ ಭಿಕ್ಷಾಟನೆಯಂತಹ ಸಮಸ್ಯೆ ಹೆಚ್ಚಾಗಲಿದೆ.
ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗೆ ಲಸಿಕೆ ನೀಡಬೇಕು. ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳನ್ನ ಆರಂಭಿಸಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ಪೂರೈಸುವ ವ್ಯವಸ್ಥೆ ಮಾಡಲಾಗುವುದು ಎಂದರು.