ರಾಜ್ಯ

ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

 ಧಾರವಾಡ ಪ್ರಜಾಕಿರಣ.ಕಾಮ್ :  ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಭಾರತೀಯ ಜನತಾ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

 ದಲಿತರಿಗೆ ಮೀಸಲಿಟ್ಟ ಅನುದಾನವನ್ನ ಅವೈಜ್ಞಾನಿಕ ಗ್ಯಾರಂಟಿಗಳಿಗೆ ವರ್ಗಾಯಿಸುವ ಹುನ್ನಾರವನ್ನು ಖಂಡಿಸಿ ರಾಜ್ಯ ಕಾಂಗ್ರೆಸ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಧಾರವಾಡ ಗ್ರಾ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಕಟ್ಟಿ ಮಾಜಿಮಹಾಪೌರ ಈರೇಶ ಅಂಚಟಗೇರಿ, ಎಸಸಿಮೋರ್ಚಾ ರಾಜ್ಯ ಪ್ರಧಾನಕಾರ್ಯದರ್ಶಿ ಮಹೇಂದ್ರ ಕೌತಾಳ,  ಜಿಲ್ಲಾಪ್ರಧಾನಕಾರ್ಯದರ್ಶಿ ವಿಜಯಾನಂದ ಶೆಟ್ಟಿ,  ದತ್ತಮೂರ್ತಿ ಕುಲಕರ್ಣಿ, ರಾಜು ಕೊಟೆನವರ, ಬಸವರಾಜ ಗರಗ, ಸುನೀಲ‌ ಮೋರೆ, ರುದ್ರಪ್ಪ ಅರವಾಳ, ಶ್ರೀನಿವಾಸ ಕೋಟ್ಯಾನ, ಅಮಿತ ಪಾಟೀಲ, ಎಸ ಸಿ ಮೋರ್ಚಾ ಪದಾಧಿಕಾರಿಗಳು ಪಾಲಿಕೆ ಸದಸ್ಯರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *