ಆಧ್ಯಾತ್ಮ

ಧಾರವಾಡದಲ್ಲಿ ಬಾವಿಗೆ ಬಿದ್ದಿದ್ದ ಹಿರಿಯ ಜೀವ ಕಾಪಾಡಿದ ಅಗ್ನಿಶಾಮಕ ದಳ

ಧಾರವಾಡ prajakiran.com : ಬಾವಿಯಲ್ಲಿ ಬಿದ್ದಿದ್ದ ವೃದ್ಧೆಯನ್ನು ರಕ್ಷಣೆ ಮಾಡಿದ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ  ಮಂಗಳವಾರ ನಡೆದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಈ ರಕ್ಷಣೆ ಮಾಡಿದ್ದು, ಮಂಜುನಾಥ ಅನ್ನೋ ಬಾಲಕ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದ.

ಆತನ ಮಾಹಿತಿ ಮೇರೆಗೆ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಗ್ಗ ಮತ್ತು ಏಣಿ ಸಹಾಯದಿಂದ ವೃದ್ಧೆಯ ರಕ್ಷಣೆ ಮಾಡುವಲ್ಲಿ ಯಶಸ್ವಿಯಾದರು.

ಕುತೂಹಲದಿಂದ ಬಾವಿ ಇಣುಕಿ ನೋಡಿದಾಗ ಬಾವಿಯಲ್ಲಿ ವೃದ್ಧೆಯನ್ನು ಗಮನಿಸಿದ್ದ ಬಾಲಕ ಮಂಜುನಾಥ ಹಿರಿಯ ಜೀವವನ್ನು ಉಳಿಸುವ ಪ್ರಯತ್ನ ಮಾಡಿದ.

50 ಅಡಿ ಆಳದ ಬಾವಿಯ ಕೆಸರಿನಲ್ಲಿ ವೃದ್ಧೆ ಸಿಲುಕಿದ್ದರಿಂದ ತೀವ್ರ ಅಸ್ವಸ್ಥಗೊಂಡಿದ್ದರು.
ಅವರನ್ನು ವನಮಾಲಾ‌ ಕಲಕರ್ಣಿ ಎಂದು ಗುರುತಿಸಲಾಗಿದೆ.

ಮಧ್ಯಾಹ್ನದ ಸಮಯದಲ್ಲಿ
ಮನೆಯಿಂದ ನಾಪತ್ತೆಯಾಗಿದ್ದ ಅವರು ಬಾವಿಯಲ್ಲಿ ಪತ್ತೆಯಾಗಿದ್ದರು.

ಅಸ್ವಸ್ಥ ವೃದ್ಧೆಯನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಲಾಗುತ್ತಿದೆ.

ಬಾಲಕ ಮಂಜುನಾಥನಿಗೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮಹಾಂತೇಶ ಬಸಾಪುರ ಹಾಗೂ ಸ್ಥಳೀಯ ಜನತೆ ಅಭಿನಂದನೆ ಸಲ್ಲಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *