ಚೆನ್ನೈ prajakiran.com : ಆ. 5ರಂದು ಮಹಾಮಾರಿ ಕರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಹಿರಿಯ ಗಾಯಕ ಎಸ್ಪಿ ಬಾಲಸುಬ್ರಮಣ್ಯ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ನಿನ್ನೇ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆದ ಹಿನ್ನಲೆಯಲ್ಲಿ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ಆಸ್ಪತ್ರೆ ಬಿಡುಗಡೆಗೊಳಿಸಿರುವ ಹೆಲ್ತ್ ಬುಲೇಟಿನ್ ತಿಳಿಸಿದೆ.
ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹಿರಿಯ ತಜ್ಞ ವೈದ್ಯರ ತಂಡದ ಸಲಹೆ ಮೇರೆಗೆ ಅವರನ್ನ ಐಸಿಯುಗೆ ದಾಖಲಿಸಲಾಗಿದ್ದು, ಆರೋಗ್ಯದ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ವಿವರಿಸಿದ್ದಾರೆ.
ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಸುಂದರ ಹಾಗೂ ಸುಮಧುರ ಗೀತೆಗಳನ್ನು ಹಾಡಿರುವ ಎಸ್ಪಿ ಬಾಲಸುಬ್ರಮಣ್ಯಅವರು ಬಹುಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಸಂಖ್ಯಾತ ಅಭಿಮಾನಿಗಳು ದೇವರಲ್ಲಿಪ್ರಾರ್ಥಿಸಿದ್ದಾರೆ.