ರಾಜ್ಯ

ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಗೆ ಕೊನೆಗೂ ಹಸಿರು ನಿಶಾನೆ

ಹುಬ್ಬಳ್ಳಿ ಧಾರವಾಡ prajakiran.com : ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಕೊನೆಗೂ ಹಸಿರು ನಿಶಾನೆ ತೋರಿಸಿದೆ.

ಈ ಕುರಿತು ಆಗಸ್ಟ್ 16ಕ್ಕೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ ಎಂದು ತಿಳಿಸಿದೆ.

ಇದರಿಂದಾಗಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ರಾಜಕೀಯ ಚಟುವಟಿಕೆಗಳು ಮತ್ತೆ ಕರೋನಾ ಆತಂಕದ ನಡುವೆಯೇ ಚುರುಕುಗೊಳ್ಳಲಿವೆ‌.

ಚುನಾವಣೆಗೆ ಹಸಿರು ನಿಶಾನೆ ತೋರಿಸಿದ ಬೆನ್ನಲ್ಲೇ ಅಭ್ಯರ್ಥಿಗಳು ತಮ್ಮ ನೆಚ್ಚಿನ ಪಕ್ಷದ ಟಿಕೇಟ್ ಗಿಟ್ಟಿಸಲು ಕಸರತ್ತು ತೀವ್ರಗೊಳಿಸಿದ್ದಾರೆ‌.

ನಾಮಪತ್ರ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನ, ನಾಮಪತ್ರ ಪರಿಶೀಲನೆ ಆ. 24, ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ ಆ. 26, ಸೆಪ್ಟೆಂಬರ 3ಕ್ಕೆ ಮತದಾನ ನಡೆಯಲಿದೆ.

ಸೆಪ್ಟೆಂಬರ 6ಕ್ಕೆ ಮತ ಎಣಿಕೆ ನಡೆಯಲಿದೆ. ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ವಾಗಲಿದೆ

ಹೈಕೋರ್ಟ್ ಆದೇಶದ ಮೇರೆಗೆ ಪ್ರಕ್ರಿಯೆಯು ನಡೆಯಲಿದ್ದು, ಮತದಾರರು ಯಾವ ರೀತಿ ಸ್ಪಂದಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *