ಧಾರವಾಡ prajakiran.com : ಧಾರವಾಡದ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಅಗಸ್ಟ್ 14ರ ವರೆಗೆ ಮೇಯರ್ ಈರೇಶ ಅಂಚಟಗೇರಿ ಅವರಿಗೆ ಗಡುವು ನೀಡಲಾಗುವುದು.
ಒಂದು ವೇಳೆ ಠರಾವು ಪಾಸ್ ಮಾಡದೇ ಇದ್ರೆ ಮುಂದೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಆಗಬೇಕೆಂದು ಚಳುವಳಿ ಆರಂಭಿಸಲಾಗುವುದು ಎಂದು ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ ತಿಳಿಸಿದರು.
ಅವರು ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಆಯ್ಕೆ ಧಾರವಾಡಕ್ಕೆ ಸಿಕ್ಕಿದ್ದು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಕೂಗು ಇರುವುದರಿಂದ ಎಂದರು.
ಧಾರವಾಡದಲ್ಲಿ ಮೊದಲ ಜಿಬಿ ನಡೆಸಬೇಕಾಗಿತ್ತು ಆದರೆ ಹುಬ್ಬಳ್ಳಿಯಲ್ಲಿ ಮೊದಲ ಜಿಬಿ ನಡೆಸುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕೂಡಲೇ ಈ ಕುರಿತು ಮೇಯರ್ ಈರೇಶ ಅಂಚಟಗೇರಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ಶಂಭು ಸಾಲಿಮನಿ, ಕವಿತಾ ಕಬ್ಬೇರ, ಮಂಜುನಾಥ ಬಡಕುರಿ ಸೇರಿದಂತೆ ಹಲವರು ಇದ್ದರು.