ಬೆಂಗಳೂರು prajakiran.com : ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನೋಂದ ಯುವತಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ವಕೀಲ ಜಗದೀಶ್ ಮೂಲಕ ದೂರು ದಾಖಲಿಸಿದ್ದಾಳೆ.
ಈ ದೂರುಬಿದೀಗ ಕರ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಯುವತಿ ನೀಡಿದ ದೂರಿನ ಪ್ರತಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ತನಗೆ ಸರ್ಕಾರಿ ಕೆಲಸ ಕೊಡುವುದಾಗಿ ಹೇಳಿ ನಂಬಿಸಿ ಲೈಂಗಿಕ ಸಂಪರ್ಕ ಹೊಂದಿ, ಬಳಿಕ ಕೆಲಸ ಕೊಡಿಸದೇ ವಂಚಿಸಿದ್ದಾರೆ.
ಅಲ್ಲದೆ, ಅಶ್ಲೀಲ ಪದಗಳನ್ನು ಬಳಸುತ್ತಾರೆ. ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾಳೆ.
ರಮೇಶ್ ಜಾರಕಿಹೊಳಿ ವಿರುದ್ಧ ಹತ್ತು ಹಲವು ಗಂಭೀರ ಆರೋಪ ಮಾಡಿದ್ದು,
ತಾನು ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದು, ಕಿರುಚಿತ್ರ ನಿರ್ಮಾಣಕ್ಕೆ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೆ.
ಕರೆ ಮಾಡಿ ತಿಳಿಸುವುದಾಗಿ ಹೇಳಿ ನಂಬರ್ ಪಡೆದಿದ್ದರು. ಬಳಿಕ ಕರೆ ಮಾಡಿ ನನ್ನ ಬಗ್ಗೆ ನನ್ನ ಕುಟುಂಬದ ಬಗ್ಗೆ ವಿಚಾರಿಸುತ್ತಾ ಸಲುಗೆಯಿಂದ ಮಾತನಾಡಿದ್ದರು.
ಪ್ರಭಾವ ಬೀರಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿದ್ದರು. ಆದರೆ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಕೇಳಿದ್ದರು. ನನ್ನ ಬಳಿ ಅಷ್ಟೊಂದು ಹಣವಿಲ್ಲ ಎಂದು ಹೇಳಿದಾಗ ಎಲ್ಲಾ ರೀತಿಯ ಸಹಕಾರ ನೀಡಿ ಖುಷಿ ನೀಡಿದರೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದರು.
ಅದನ್ನು ನಂಬಿ ಅವರು ಹೇಳಿದಂತೆ ನಡೆದುಕೊಂಡಿದ್ದಾಗಿ ಯುವತಿ ವಿವರಿಸಿದ್ದಾಳೆ.
ಬಳಿಕ ತನಗೆ ಕೆಲಸ ಕೊಡಸದೆ ಇದ್ದಾಗ ಪ್ರಶ್ನೆ ಮಾಡಿದ್ದಕ್ಕೆ ಕೆಲಸದ ವಿಚಾರ ಆಮೇಲೆ ನೋಡೋಣ ಎಂದು ಅವಾಯ್ಡ್ ಮಾಡಲು ಆರಂಭಿಸಿದರು.
ರಮೇಶ್ ಜಾರಕಿಹೊಳಿ ಮತ್ತು ಅವರ ಬೆಂಬಲಿಗರಿಂದ ತನಗೆ ಹಾಗೂ ತನ್ನ ಕುಟುಂಬದ ಸದಸ್ಯರಿಗೆ ಜೀವ ಭಯವಿದ್ದು, ಸೂಕ್ತ ರಕ್ಷಣೆ ನೀಡಬೇಕು ಎಂದು ಯುವತಿ ದೂರಿನಲ್ಲಿ ಮನವಿ ಮಾಡಿದ್ದಾಳೆ.