ಅಂತಾರಾಷ್ಟ್ರೀಯ

ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರಿದ ಜಗದೀಶ ಶೆಟ್ಟರ್….!

ನವದೆಹಲಿ ಪ್ರಜಾಕಿರಣ.ಕಾಮ್ : ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ತಮಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗಲಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿ ಬಿಜೆಪಿಗೆ ಗುಡ್ ಬೈ ಹೇಳಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಮರಳಿ ಗೂಡಿಗೆ ಸೇರಿದ್ದಾರೆ‌.

ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಮಾತುಕತೆ ನಡೆಸಿದ ಬಳಿಕ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರದ ಸಚಿವರಾದ ಭೂಪೇಂದ್ರ ಯಾದವ್ ಹಾಗೂ ರಾಜೀವ ಚಂದ್ರಶೇಖರ ಮತ್ತು ರಾಜ್ಯದ ಬಿಜೆಪಿ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ಸ್ವೀಕರಿಸಿದರು.

ಬಳಿಕ ಮಾತನಾಡಿ, ಈಗಾಗಲೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡಿ ರಾಜೀನಾಮೆ ಸಲ್ಲಿಸಿದ್ದೇನೆ..

ಅಲ್ಲದೆ, ವಿಧಾನ ಪರಿಷತ್ ಸದಸ್ಯತ್ವಕ್ಕೂ ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆಗೆ ದೂರವಾಣಿಯ ಮೂಲಕ ಮಾತನಾಡಿ ಈಮೇಲ್ ಮಾಡಿದ್ದೇನೆ ಎಂದು ತಿಳಿಸಿದರು.

ಪ್ರಧಾನಿ‌ ನರೇಂದ್ರ ಮೋದಿಯವರು ಹತ್ತು ವರ್ಷಗಳ ಕಾಲ ಭಾರತವನ್ನು ವಿಶ್ವ ಗುರುವಾಗಿಸಲು ಶ್ರಮಿಸಿದ್ದಾರೆ.

ಹೀಗಾಗಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕೆಂಬ ಬಿಜೆಪಿಯ ಕೋಟ್ಯಾಂತರ ಕಾರ್ಯಕರ್ತರ ಆಶಯದಂತೆ ನಾನು ಪಕ್ಷಕ್ಕೆ ದುಡಿಯುವುದಾಗಿ ಪ್ರಕಟಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *