ಹುಬ್ಬಳ್ಳಿ prajakiran.com : ಧಾರವಾಡ ಶಾಸಕ ಅರವಿಂದ ಬೆಲ್ಲದ ಸಚಿವ ಸ್ಥಾನ ವಂಚಿತರಾದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಹೇಳಿಕೆಗೆ ನಾನು ಯಾವುದೇ ಚರ್ಚೆ ಮಾಡಲ್ಲ.
ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನುಣುಚಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರನ್ನು
ನೂತನ ಸಚಿವರಾದ ಮುರುಗೇಶ ನಿರಾಣಿ ಹಾಗೂ ಶಂಕರ ಪಾಟೀಲ ಮುನೇನಕೊಪ್ಪ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದರು.
ಸಚಿವರಾದ ನಂತರ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಬಂದಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಪಕ್ಷದಲ್ಲಿ ಹಿರಿಯ ನಾಯಕರನ್ನ ಕಡೆಗಣನೆ ಮಾಡುತ್ತಿಲ್ಲ. ಆ ತರ ಏನೂ ಇಲ್ಲ. ಪಕ್ಷದಲ್ಲಿ ಹಿರಿಯರಿಗೂ ಸ್ಥಾನ ಮಾನ ನೀಡಲಾಗಿದೆ ಎಂದರು.
ಆರ್.ಅಶೋಕ್, ಈಶ್ವರಪ್ಪ ಸೇರಿದಂತೆ ಹಲವರಿಗೆ ಸ್ಥಾನ ನೀಡಿದೆ.
ಯಡಿಯೂರಪ್ಪ ಅವರು ಈವರೆಗೂ ಜನಪರವಾದ ಆಡಳಿತ ನೀಡಿದ್ದಾರೆ
ಅದರ ಅಡಿಯಲ್ಲಿ ಬಸವರಾಜ ಬೊಮ್ಮಾಯಿ ಕೆಲಸ ಮಾಡಲಿದ್ದಾರೆ
ಬಿಜೆಪಿ ಗೆ ತನ್ನದೇ ಆದಂತಹ ತತ್ವ ಸಿದ್ಧಾಂತವಿದೆ ಅದರ ಅಡಿಯಲ್ಲಿ ಬೊಮ್ಮಾಯಿ ಅವರು ಕೆಲಸ ಮಾಡಲಿ ಎಂದು ಹೇಳುತ್ತೇನೆ
ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ದಿ ಮಾಡಲಿ. ರಾಜ್ಯದಲ್ಲಿ ಅಪೂರ್ಣವಾದಂತಹ ಕೆಲಸಗಳನ್ನ ಮುಂದುವರೆಸಲು ನಿರ್ದೇಶನಗಳನ್ನ ನೀಡುತ್ತೇನೆ
ಮುಂದಿನ ಚುನಾವಣೆಯಲ್ಲಿ ಪಕ್ಷ ನೀಡಿದ ಜವಾಬ್ದಾರಿಗಳನ್ನ ನಿಭಾಯಿಸುತ್ತೇನೆ ಎಂದು ಜಗದೀಶ್ ಶೆಟ್ಟರ್ ವಿವರಿಸಿದರು.