ರಾಜ್ಯ

ಆದಿತ್ಯ ಮಿಲ್ಕ್ ಸಂಸ್ಥಾಪಕ ಶಿವಕಾಂತ ಸಿದ್ನಾಳ ಇನ್ನಿಲ್ಲ….!

ಬೆಳಗಾವಿ ಪ್ರಜಾಕಿರಣ.ಕಾಮ್  : ಜಿಲ್ಲೆಯ ಖ್ಯಾತ ಉದ್ಯಮಿ, ಆದಿತ್ಯ ಮಿಲ್ಕ್ ಸಂಸ್ಥಾಪಕ ಶಿವಕಾಂತ ಎಸ್. ಸಿದ್ನಾಳ (48) ಅವರು ಶನಿವಾರ ವಿಧಿವಶರಾದರು.

ಅವರಿಗೆ ಪತ್ನಿ ದೀಪಾ ಸಿದ್ನಾಳ, ಓರ್ವ ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ.

ಮೂಲತಃ ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದ ಶಿವಕಾಂತ ಸಿದ್ನಾಳ ಅವರು ಆದಿತ್ಯ ಮಿಲ್ಕ್ ಉದ್ಯಮ ಆರಂಭಿಸುವ ಮೂಲಕ ಜಿಲ್ಲೆಯಲ್ಲಿ ಹೈನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದ್ದರು.

ವಿಆರ್‌ಎಲ್ ಸಂಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಅವರ ಅಳಿಯರಾಗಿದ್ದ ಶಿವಕಾಂತ ಸಿದ್ನಾಳ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಶಿವಕಾಂತ ಸಿದ್ನಾಳ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೈಲಹೊಂಗಲ ತಾಲೂಕಿನ ಕುರಗುಂದ ಗ್ರಾಮದ ಆದಿತ್ಯ ಮಿಲ್ಕ್ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಭಾನುವಾರ ಮಧ್ಯಾಹ್ನ 12 ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶವಿದ್ದು, 3 ಗಂಟೆ ನಂತರ ಅಂತ್ಯ ಸಂಸ್ಕಾರ ನಡೆಯಲಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *