ಧಾರವಾಡ prajakiran.com : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಪುಸ್ತಕ ಮಳಿಗೆಯೊಂದು ಹೊತ್ತಿ ಉರಿದ ಘಟನೆ ಧಾರವಾಡದಲ್ಲಿ ಶನಿವಾರ ಸಂಜೆ ನಡೆದಿದೆ.
ನಗರದ ಕಿಟಲ್ ಮಹಾವಿದ್ಯಾಲಯದ ಪಕ್ಕದಲ್ಲಿರುವ ವಿಜಯ ಲಕ್ಷ್ಮೀ ಬುಕ್ ಸ್ಟಾಲ್ ಶಾಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ.
ತಕ್ಷಣ ಮಾಹಿತಿ ಅರಿತು
ಅಗ್ನಿ ಶಾಮುಕ ದಳದ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.
ಆದರೂ ಬೆಂಕಿಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.