ಶ್ರೀನಗರ prajakiran.com : ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಮೂವರು ನಾಗರಿಕರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಬಾರ್ಬರ್ ಶಾ ಪ್ರದೇಶದಲ್ಲಿ ನಡೆದಿದೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಶನಿವಾರ ಸಂಜೆ ಕ್ರಾಲ್ ಖುಡ್ ಪೊಲೀಸದ ಠಾಣೆ ವ್ಯಾಪ್ತಿಯಲ್ಲಿನ ಬಾರ್ಬರ್ ಶಾದಲ್ಲಿ ಸಿಆರ್ಪಿಎಫ್ ಹಾಗೂ ಜಮ್ಮು ಕಾಶ್ಮೀರ ಪೊಲೀಸರ ಮೇಲೆ ಉಗ್ರರು ಗ್ರೆನೇಡ್ ಹಾರಿಸಿದ್ದಾರೆ. ಗ್ರೆನೇಡ್ ಸ್ಫೋಟಗೊಂಡಿದ್ದು, ಮೂವರು ನಾಗರಿಕರಿಗೆ ಗಾಯಗಳಾಗಿವೆ ಎಂದು ಮಾಹಿತಿ ತಿಳಿಸಿದರು.
ದಾಳಿ ನಡೆದ ಬಗ್ಗೆ ಭದ್ರತಾ ಪಡೆಗಳು ಮಾಹಿತಿ ಕಲೆಹಾಕುತ್ತಿದ್ದು, ದಾಳಿಕೋರರಿಗಾಗಿ ಶೋಧಕಾರ್ಯ ಆರಂಭಿಸಲಾಗಿದೆ ಎನ್ನಲಾಗಿದೆ.