ಬೆಂಗಳೂರು prajakiran.com : ದಲಿತ ಕವಿ ಡಾ. ಸಿದ್ದಲಿಂಗಯ್ಯ( 67) ಶುಕ್ರವಾರ ಸಂಜೆ ವಿಧಿವಶರಾದರು.
ಅವರು ಕಳೆದ ಹಲವು ದಿನಗಳಿಂದ ಕರೋನಾ ದಿಂದ ಬಳಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಇಂದು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು.
1954 ರಲ್ಲಿ ಮಾಗಡಿ ತಾಲೂಕಿನ ಮಂಚನಕೆರೆಯಲ್ಲಿ ಜನಿಸಿದ್ದರು.
ಅವರು ಪ್ರಾಧ್ಯಾಪಕರಾಗಿ, ಸಾಹಿತಿಯಾಗಿ, ಸಂಘಟಕರಾಗಿ, ಹೋರಾಟಗಾರರಾಗಿ ಜೊತೆಗೆ ತಮ್ಮ ಊರುಕೇರಿ, ಹೊಲೆ ಮಾದಿಗರ ಹಾಡು ಮೂಲಕ ನಾಡಿನ ಮನೆ ಮಾತಾಗಿದ್ದರು.
ಅವರ ಸಾಹಿತ್ಯ ಸೇವೆಗೆ ರಾಜ್ಯೋತ್ಸವ, ಆಳ್ವಾಸ್ ನುಡಿಸಿರಿ, ಡಾ.ಬಿ.ಆರ್. ಅಂಬೇಡ್ಕರ್, ನಾಡೋಜ ಸೇರಿದಂತೆ ಅನೇಕ ಪ್ರಶಸ್ತಿ ಸಂದಿದ್ದವು.
ಜೊತೆಗೆ ಅವರು ದಲಿತ ಚಳುವಳಿಯ ಮೂಲಕ ಹೋರಾಟಗಾರರಿಗೆ ದೊಡ್ಡ ಪ್ರೇರಣಾ ಶಕ್ತಿಯಾಗಿದ್ದರು .
ಆನಂತರ ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎರಡು ಅವಧಿಗೆ ಮುಂದುವರೆದಿದ್ದರು.
ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.