ಮೊದಲ ಹಂತದಲ್ಲಿ ಹಲವು ಸಚಿವರ ಪ್ರಮಾಣ ವಚನ
ಬೆಂಗಳೂರು ಪ್ರಜಾಕಿರಣ.ಕಾಮ್ : ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಪಾರ ಜನಸ್ತೋಮದ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಶನಿವಾರ ಮಧ್ಯಾಹ್ನ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗ್ಲೆಹೋಟ್ ಪ್ರಮಾಣ ವಚನ ಬೋಧಿಸಿದರು.
ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಕಾಡಸಿದ್ದೇಶ್ವರ ಮಠದ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಅಲ್ಲದೆ ಮೊದಲ ಹಂತದಲ್ಲಿ
ಸಚಿವ ಸಂಪಯಟ ದರ್ಜೆ ಸ್ಥಾನಮಾನದ ಸಚಿವರಾಗಿ ಕೆ.ಎಚ್
ಮುನಿಯಪ್ಪ, ಡಾ. ಜಿ.ಪರಮೇಶ್ವರ, ಪ್ರಿಯಾಂಕಾ ಖರ್ಗೆ, ಸತೀಶ ಜಾರಕಿಹೊಳಿ, ಎಂ.ಬಿ. ಪಾಟೀಲ, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಜಮೀರ್ ಅಹ್ಮದ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ದೇಶದ ಮೂಲಡ ಮೂಲೆಗಳಿಂದ ಗಣ್ಯರ ದಂಡು ಹರಿದು ಬಂದಿತ್ತು.