ರಾಜ್ಯ

ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿಯನ್ನು ಜೆಡಿಎಸ್ ಬೆಂಬಲಿಸಲಿ : ಸಿದ್ದರಾಮಯ್ಯ

ಧಾರವಾಡ prajakiran. com : ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿ ಯನ್ನು ಜೆಡಿಎಸ್ ಬೆಂಲಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಸದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆ ಹಿನ್ನೆಲೆ
ಕೋಮುವಾದಿಗಳನ್ನು ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಬೇಕು ಎಂಬ ಎಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ನಾವು ಯಾವತ್ತಿಗೂ ಕೋಮುವಾದಿಗಳನ್ನು ವಿರೋಧಿಸುತ್ತೇವೆ.
ಜೆಡಿಎಸ್ ಗಿಂತ ಮೊದಲೇ ನಾವು ತೀರ್ಮಾನ ಮಾಡಿ ರಾಜ್ಯಸಭೆಯ ಚುನಾವಣೆಗೆ ಎರಡನೇ ಅಭ್ಯರ್ಥಿ ಹಾಕಿದ್ದೇವೆ.

ನಮ್ಮ ಅಭ್ಯರ್ಥಿ ಹಾಕಿದ ಒಂದು ತಿಂಗಳ ನಂತರ ಅವರು ಅಭ್ಯರ್ಥಿ ಹಾಕಿದ್ದಾರೆ.
ಕೋಮುವಾದಿ ಅಭ್ಯರ್ಥಿ ಸೋಲಿಸಬೇಕು ಎಂಬ ಉದ್ದೇಶವಿದ್ದರೆ. ಅವರು ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಹೇಳಿದರು.

ನಾವು ಅಲ್ಪಸಂಖ್ಯಾತ ಸಮುದಾಯದ
ಮನ್ಸೂರ್ ಅಲಿಖಾನ್ ರನ್ನು ಹಾಕಿದ್ದೇವೆ.
ಅವರನ್ನು ಗೆಲ್ಲಿಸಬೇಕಿದ್ದರೆ ನಮಗೆ ಮತ ಹಾಕಲಿ.

ದೇವೇಗೌಡರು ರಾಜ್ಯಸಭೆಗೆ ನಿಂತಾಗ ನಾವು ಅಭ್ಯರ್ಥಿ ಹಾಕಿದ್ದೇವಾ?
ಅವರಿಗೆ ಕೇಳಿ ಈ ಪ್ರಶ್ನೆ ಎಂದರು.

ಜೆಡಿಎಸ್ ನವರು 37 ಜನ ಇದ್ದರೂ ಕೂಡ ಬಿಜೆಪಿ ಅಧಿಕಾರಕ್ಕೆ ಬರಬಾರದು ಅಂತ ಅವರನ್ನೇ ಸಿಎಂ ಮಾಡಿದ್ದೆವು.

ದೇವೇಗೌಡರು ಪಿಎಂ ಆಗಲು ಕೂಡ ನಾವು ಬೆಂಬಲ ನೀಡಿದ್ದೇವೆ.
ನಮಗೆ ಈಗ ಅವರು ಬೆಂಬಲ ಕೊಡಲಿ.
ಕೋಮುವಾದಿ ಸೋಲಿಸೋಕೆ ನಮಗೆ ಬೆಂಬಲ ಕೊಡಲಿ
ನಾವೇ ಕೋಮುವಾದಿಗಳನ್ನು ಸೋಲಿಸುತ್ತೇವೆ.

ನಾವು ಅನೇಕ ಬಾರಿ ಅವರಿಗೆ ಸಹಾಯ ಮಾಡಿದ್ದೇವೆ
ಎಂದು ತಿರುಗೇಟು ನೀಡಿದರು.

ಬಿ.ಎಸ್. ಯಡಿಯೂರಪ್ಪ ಭೇಟಿ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು,
ನಮ್ಮದು ಹಲೋ ಹಲೋ ಅಷ್ಟೇ .
ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ
ಗುರಿಕಾರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಕ್ಷೇತ್ರದ ಎಲ್ಲ ಶಿಕ್ಷಕ ಮತದಾರರು
ಈ ಸಾರಿ ಬದಲಾವಣೆ ಬಯಸಿದ್ದಾರೆ.

ಗುರಿಕಾರ ಅವರು ಕಳೆದ
30 ವರ್ಷದಿಂದ ಶಿಕ್ಷಕರ ಪರವಾಗಿ ಹೋರಾಡಿದ ವ್ಯಕ್ತಿ ಅವರು ಈ ಬಾರಿ ಅವರು ಗೆಲ್ಲಬೇಕು ಎಂದು ಸಿದ್ಧರಾಮಯ್ಯ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಂ ಅಹ್ಮದ, ಶಾಸಕರಾದ ಶ್ರೀನಿವಾಸ ಮಾನೆ,
ಕುಸುಮಾವತಿ ಶಿವಳ್ಳಿ, ಮಾಜಿ ಶಾಸಕರಾದ ಬಿ.ಆರ್.ಯಾವಗಲ್ಲ, ಎನ್.ಎಚ್.ಕೋನರಡ್ಡಿ, ಜಿಲ್ಲಾ ಅಧ್ಯಕ್ಷರಾದ ಅನಿಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರ, ಮುಖಂಡರಾದ ದೀಪಕ ಚಿಂಚೋರೆ, ಪಿ.ಎಚ್.ನೀರಲಕೇರಿ, ದಾನಪ್ಪ ಕಬ್ಬೇರ ಮತ್ತಿತರರು ಜೊತೆಗಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *