ಬೆಂಗಳೂರು prajakiran.com : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಡ ರಾತ್ರಿ ಜ್ವರ ಕಾಣಿಸಿಕೊಂಡಿದ್ದು, ಮನೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಕೊರೋನಾ ಪರೀಕ್ಷೆ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿರುವುದು ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಮಾಡಿದೆ.
ಈ ಹಿನ್ನೆಲೆಯಲ್ಲಿ ವೈದ್ಯರು ಮನೆಯಲ್ಲೇ ಚಿಕಿತ್ಸೆ, ವಿಶ್ರಾಂತಿ ಪಡೆಯುತ್ತಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಪ್ರವಾಸ ಮೊಟಕುಗೊಳಿಸಿ, ಕಾಲ ವಿಶ್ರಾಂತಿ ಪಡೆಯುತ್ತಿದ್ದಾರೆ.
ಹೀಗಾಗಿ ಮಂಗಳವಾರ ಮತ್ತು ಬುಧವಾರ ನಡೆಯಬೇಕಿದ್ದ ಸಿದ್ದರಾಮಯ್ಯನವರ ಕಾರ್ಯಕ್ರಮಗಳು ರದ್ದುಗೊಳಿಸಲಾಗಿದೆ.