ಧಾರವಾಡ ಪ್ರಜಾಕಿರಣ. ಕಾಮ್ : ಕಾಂಗ್ರೆಸ್ಸಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ಥಿತಿ …. ಸುಟ್ಟ ಬೆಕ್ಕಿನಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ ಮಾಡಿದರು.
ಧಾರವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂತಹ ಪರಿಸ್ಥಿತಿ ಬರಬಾರದಾಗಿತ್ತು ಎಂದು ಲೇವಡಿ ಮಾಡಿದರು.
ಕರ್ನಾಟಕ ರಾಜ್ಯದಲ್ಲಿ 160 ಜನರಲ್ ವಿಧಾನ ಸಭಾ ಕ್ಷೇತ್ರಗಳಿವೆ. ಸಿದ್ದರಾಮಯ್ಯಗೆ ಒಂದು ಕ್ಷೇತ್ರ ಸಿಗದಂತಾಗಿದೆ. ಒಮ್ಮೆ ಕೋಲಾರ ಹೋಗ್ತಾರೆ, ಒಮ್ಮೆ ಚಾಮರಾಜನಗರ ಹೋಗ್ತಾರೆ ಎಂದು ವ್ಯಂಗ್ಯ ವಾಡಿದರು.
ಸಿದ್ದರಾಮಯ್ಯ ಹಾಗೂ ಡಿಕೆಶಿ ಚುನಾವಣೆ ಸ್ಪರ್ಧೆ ನಿಲ್ಲುವುದು ಬೇಡ ಎಂಬ ಮಾಜಿ ಸಚಿವ ಸಂತೋಷ ಲಾಡ್ ಅವರ ಹೇಳಿಕೆ ವಿಚಾರವಾಗಿ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೋಲುತ್ತಾರೆ ಎಂಬ ಭಯ ಕಾಂಗ್ರೆಸ್ ಮುಖಂಡರಿಗೆ ಎದುರಾಗಿದೆ ಎಂದು ಛೇಡಿಸಿದರು.
ಶಾಸಕ ಜಮೀರ್ ಅಹಮ್ಮದ್ ಖಾನ್ ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಲಕ್ಷ ಲಕ್ಷ ಜನ ಸೇರಿದ್ದರು ಎಂದು ಹೇಳಿದರು. ಆದರೆ ಒಬ್ಬ ಮಾಜಿ ಸಿಎಂಗೆ ಒಂದು ಕ್ಷೇತ್ರ ಇಲ್ಲದಂತಾಗಿದೆ ಎಂದು ಟೀಕಿಸಿದರು.