ಬೆಂಗಳೂರು prajakiran.com : ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರಿ ಮತ್ತು ಸಿಎಂ ಕಚೇರಿ ಸಿಬ್ಬಂದಿಗೆ ಕಾಡಿದ ಕರೋನಾ ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವ್ಯಾಪಿಸಿದೆ.
ಈ ಕುರಿತು ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಹೀಗಿದೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
ಇದು ಅವರ ಸಂಪರ್ಕಕ್ಕೆ ಬಂದ ಹಲವು ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರಿಗೆ ಢವ ಢವ ಶುರುವಾಗಿದೆ. ಕೆಲವರು ಸ್ವಯಂಪ್ರೇರಿತವಾಗಿ ತಪಾಸಣೆಗೆ ಮುಂದಾಗಿದ್ದರೆ, ಕೆಲವರು ಹೋಂ ಕ್ವಾರಂಟಿನ್ ಆಗಲು ಮುಂದೆ ಬಂದಿದ್ದಾರೆ.
ಅಲ್ಲದೆ, ಅವರ ಆರೋಗ್ಯ ಕುರಿತು ಕಾಳಜಿ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸೇರಿ ಅನೇಕರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
pls follow and like us on facebook
https://www.facebook.com/prajakirannews/