ಆಧ್ಯಾತ್ಮ

ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆ ಅವಕಾಶ

ಶಿವಮೊಗ್ಗ prajakiran.com : ನಾಡಿನ ಸುಪ್ರಸಿದ್ಧ ಯಾತ್ರಾ ಹಾಗೂ ಪವಿತ್ರ ಸ್ಥಳವಾದ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯವನ್ನು ಮಹಾಮಾರಿ ಕೋವಿಡ್- ೧೯ ನ ಕಾರಣದಿಂದಾಗಿ ಮಾ. ೨೨ ರಂದು ಸರ್ಕಾರದ ಆದೇಶ ಮೇರೆಗೆ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ದೇವಿಯ ದರ್ಶನ ಹಾಗೂ ಪೂಜೆಯನ್ನು ನಿಲ್ಲಿಸಲಾಗಿತ್ತು.

ನಂತರದ ದಿನಗಳಲ್ಲಿ ಸರ್ಕಾರವು ಲಾಕ್‌ಡೌನ್ ತೆರವುಗೊಳಿಸಿ ಎಲ್ಲಾ ದೇವಸ್ಥಾನ ಹಾಗೂ ಮಠ ಮಂದಿರಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಿತ್ತು.

ಆದರೆ ಸಾರ್ವಜನಿಕ ಹಿತದೃಷ್ಠಿ ಹಾಗೂ ಸ್ಥಳೀಯ ಆಡಳಿತದ ಸಲಹೆಯ ಮೇರೆಗೆ ಲಾಂಚ್‌ನಲ್ಲಿ ಅಂತರ ಕಾಯ್ದುಕೊಳ್ಳುವುದು ಅಸಾಧ್ಯ ಹಾಗೂ ಈ ಹಳ್ಳಿ ನಾಡಿನ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಇಲ್ಲಿಯವರೆಗೆ ದೇವಿಯ ದರ್ಶನವನ್ನು ನಿಲ್ಲಿಸಲಾಗಿತ್ತು.

ಆದರೆ ಈಗ ಅನೇಕ ಭಕ್ತಾಧಿಗಳ ಒತ್ತಾಯದ ಮೇರೆಗೆ ಹಾಗೂ ಪ್ರವಾಸಿಗರ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಂದವರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಲಾಂಚಿನಲ್ಲಿ ಪ್ರಯಾಣಿಸುವವರು ಲಾಂಚಿನ ಸಿಬ್ಬಂದಿಗಳ ಸಲಹೆ ಪಡೆದು ಕಡ್ಡಾಯವಾಗಿ ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ದೇವಿಯ ದರ್ಶನವನ್ನು ಪಡೆಯಬೇಕೆಂದು ದೇವಸ್ಥಾನದ ಆಡಳಿತ ಮಂಡಳಿಯವರು ತಿಳಿಸಿರುತ್ತಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *