ಧಾರವಾಡ prajakiran.com :
ಧಾರವಾಡದ ಹಿರಿಯ ಪತ್ರಕರ್ತ ಸೂರ್ಯಕಾಂತ ಶಿರೂರ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ
ಇಹಲೋಕ ತ್ಯಜಿಸಿದರು.
ಅವರಿಗೆ ಕಳೆದ ಹಲವು ದಿನದ ಹಿಂದೆ ಲಘು ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಅವರು ವಿಧಿವಶರಾದರು.
ಅವರು ಕಳೆದ ಹಲವು ದಶಕಗಳಿಂದ ವಿವಿಧ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿ ಸದ್ಯ ಸಂಜೆವಾಣಿ ಧಾರವಾಡ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಜೊತೆಗೆ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು.
ಮೂಲತಃ ಧಾರವಾಡ ತಾಲೂಕಿನ ಮರೇವಾಡ ಗ್ರಾಮದವರು. ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಅವರ ನಿಧನಕ್ಕೆ ಧಾರವಾಡ ಜಿಲ್ಲೆಯ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ