ಜಿಲ್ಲೆ

ಧಾರವಾಡದ ಹಿರಿಯ ಪತ್ರಕರ್ತ ಸೂರ್ಯಕಾಂತ ಶಿರೂರ ಇನ್ನಿಲ್ಲ

ಧಾರವಾಡ prajakiran.com :
ಧಾರವಾಡದ ಹಿರಿಯ ಪತ್ರಕರ್ತ ಸೂರ್ಯಕಾಂತ ಶಿರೂರ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ
ಇಹಲೋಕ ತ್ಯಜಿಸಿದರು.

ಅವರಿಗೆ ಕಳೆದ ಹಲವು ದಿನದ ಹಿಂದೆ ಲಘು ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೆ ಅವರು ವಿಧಿವಶರಾದರು.

ಅವರು ಕಳೆದ ಹಲವು ದಶಕಗಳಿಂದ ವಿವಿಧ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿ ಸದ್ಯ ಸಂಜೆವಾಣಿ ಧಾರವಾಡ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಜೊತೆಗೆ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು.

ಮೂಲತಃ ಧಾರವಾಡ ತಾಲೂಕಿನ ಮರೇವಾಡ ಗ್ರಾಮದವರು. ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅವರ ನಿಧನಕ್ಕೆ ಧಾರವಾಡ ಜಿಲ್ಲೆಯ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *