ಅಪರಾಧ

ಬೆಳಗಾವಿ : ಭೀಕರ ಅಪಘಾತದಲ್ಲಿ ಧಾರವಾಡ ಮೂಲದ ಆರು ಜನರ ಸಾವು….!

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಆರು ಜನ ಸಾವು.ಮದುವೆ ಮುಗಿಸಿ ಮರಳುತ್ತಿದ್ದಾಗ ಘಟನೆ.

ಬೆಳಗಾವಿ ಪ್ರಜಾಕಿರಣ.ಕಾಮ್ :- ಬೆಳಗಾವಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಆರು ಜನ ಸಾವನ್ನಪ್ಪಿದ ಘಟನೆ ನಡೆದಿದೆ.
ಮದುವೆ ಮುಗಿಸಿ ವಾಪಾಸ್ಸು ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು ಆರು ಜನರ ಜೀವ ತೆಗೆದುಕೊಂಡಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಘಟನೆ ನಡೆದಿದ್ದು. ಮೃತರ ಹೆಸರು ತಿಳಿದು ಬಂದಿಲ್ಲ.

ಮದುವೆ ಮುಗಿಸಿ ವಾಪಸ್ ತೆರಳುವಾಗ ಭೀಕರ ರಸ್ತೆ ಅಪಘಾತವಾಗಿದ್ದು
ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದೆ.ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

*ಬೆಳಗಾವಿ ಭೀಕರ ಅಪಘಾತ; ಧಾರವಾಡ ಮೂಲದ ಕುಟುಂಬ ಸದಸ್ಯರ ಸಾವು*

ಧಾರವಾಡ: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಆರು ಜನ ಸಾವನ್ನಪ್ಪಿದ್ದು, ಕುಟುಂಬದ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ. ಧಾರವಾಡ ಭೂಸಪ್ಪ ಚೌಕ ಬಳಿಯ ಮೃತರ ನಿವಾಸದ ಬಳಿ ಜನರು ರೋಧನೆ ಮುಗಿಲು ಮುಟ್ಟಿದೆ.

ಮದುವೆ ಮುಗಿಸಿಕೊಂಡು ಮರಳಿ ಮನೆಗೆ ಬರುವಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಗುದ್ದಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಧಾರವಾಡ ಮೂಲದ ಕಾರು ಚಾಲಕ ಶಾರುಕ್ ಪೆನ್ಡಾರಿ (30), ಇಕ್ಬಾಲ್ ಜಮಾದಾರ್(50), ಸಾನಿಯಾ ಲಂಗೋಟಿ(37), ಉಮ್ರಾ ಬೆಗಮ್ ಲಂಗೋಟಿ(17), ಶಬಾನಾಬಾನು ಲಂಗೋಟಿ(37), ಪರಾನ್ ಲಂಗೋಟಿ(13) ಸಾವನ್ನಪ್ಪಿದ್ದಾರೆ.

ಧಾರವಾಡ ಭೂಸಪ್ಪ ಚೌಕ ಬಳಿಯ ಮೃತರ ನಿವಾಸದ ಬಳಿ ಜನರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಕಣ್ಣೀರು ಹಾಕುತ್ತಲೇ ಕುಟುಂಬ ಸದಸ್ಯರು ರೋಧಿಸುತ್ತಿರುವ ದೃಶ್ಯ ಕಂಡುಬಂದವು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *