ಅಪರಾಧ

ಹಾಸನದಲ್ಲಿ ಹಾವು ಕಡಿತಕ್ಕೆ ರೈತ ಮಹಿಳೆ ಬಲಿ

ಹಾಸನ ಪ್ರಜಾಕಿರಣ.ಕಾಮ್ ಜಮೀನಿನಲ್ಲಿ ಕಳೆ ಕೀಳುತ್ತಿದ್ದ ರೈತ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ.

ಚಂದ್ರಮ್ಮ (60) ಮೃತ ಮಹಿಳೆ. ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಅವರ ಬಲಗೈಗೆ ಹಾವು‌ ಕಚ್ಚಿದೆ.

ಕೂಡಲೇ ಅವರನ್ನು ಸ್ಥಳೀಯರು ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಗೆ ಕರೆ ತಂದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.

ಚಂದ್ರಮ್ಮ ಅವರಿಗೆ ಕಚ್ಚಿದ ಹಾವನ್ನು ಸ್ಥಳೀಯ ಉರಗತಜ್ಞರೊಬ್ಬರು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದರು.

ಈ ಕುರಿತು ಮಾಹಿತಿ ಪಡೆದ ಹಳ್ಳಿಮೈಸೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ‌ ಜರುಗಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *