ಅಪರಾಧ

ದಾವಣಗೆರೆಯಲ್ಲಿ 2 ತಲೆಯ ಹಾವು ಮಾರಲು ಯತ್ನಿಸಿದ ಕಿರಾತಕರು ಅಂದರ್​…..!

ದಾವಣಗೆರೆ prajakiran.com :ಬೆಣ್ಣೆನಗರಿ ದಾವಣಗೆರೆಯಲ್ಲಿ 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​ ಆದ ಘಟನೆ ನಡೆದಿದೆ.

ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನ ಮಾಡಲಾಗಿದ್ದು, ಬಂಧಿತರಿಂದ
2 ತಲೆ ಹಾವುಗಳನ್ನು ವಶಪಡಿಸಿಕೊಳ್ಳಲಾಗಿದೆ.

.ಬಂಧಿತರನ್ನು ಚಿತ್ರದುರ್ಗದ ಗಣೇಶ್(28), ಚನ್ನಗಿರಿಯ ಅಭಿಲಾಷ್‌(21), ಶಿವಮೊಗ್ಗದ ನಾಗರಾಜ್‌(34), ಬಳ್ಳಾರಿಯ ಮುತ್ತಪ್ಪ(27) ಹಾಗೂ ಗಾಣದಕಟ್ಟೆಯ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎರಡು ತಲೆಯ 3 ಹಾವುಗಳನ್ನು ಜಪ್ತಿ ಮಾಡಲಾಗಿದೆ.

ಈ ಕಿರಾತಕರು ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಕಾಯುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ನಗರದ CEN ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *