ರಾಜ್ಯ

ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತಿ ವಹಿಸಿ, ಯಾಮಾರಿದ್ರೆ ಪೊಲೀಸ್ ಮೊರೆ ಹೋಗಿ ಧಾರವಾಡ ಎಸ್ಪಿ ಸಲಹೆ

ಧಾರವಾಡ prajakiran. com : ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಮೋಸಮಾಡಿ, ವಂಚಿಸಿದ ಪ್ರಕರಣ ಬೇಧಿಸಿದ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಸುದ್ದಿಗಾರರೊಂದಿಗೆ ಮಾತನಾಡಿ, ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ವಾಟ್ಸ್‍ಪ್, ಮೇಸೆಂಜರ್, ಟ್ವೀಟರ್ ಮುಂತಾದವುಗಳ ಬಳಕೆಯಲ್ಲಿ ಜಾಗೃತಿ ವಹಿಸಬೇಕು. ಅನಗತ್ಯ ಚಾಟಿಂಗ್, ಮೇಸೆಜ್ ಮಾಡುವುದರಿಂದ ದೂರವಿರಬೇಕು.

ವಿವಿಧ ರೀತಿಯ ಅಪರಾಧ ಕೃತ್ಯಗಳು, ಅಮಾಯಕರಿಗೆ ಮೋಸ, ವಂಚನೆ, ಬೆದರಿಕೆ ಮತ್ತು ಬ್ಲ್ಯಾಕ್‍ಮೇಲ್ ದಂತಹ ಕೃತ್ಯಗಳಿಂದ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಪ್ರಕರಣಗಳು ಸಂಭವಿಸುತ್ತಿವೆ ಎಂದು ಎಚ್ಚರಿಸಿದ್ದಾರೆ.

ಸಾರ್ವಜನಿಕರು ತಮ್ಮ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಮಿತ ಹಾಗೂ ಜಾಗೃತಿ ವಹಿಸಿದರೆ ಮೋಸ, ವಂಚನೆಗಳಿಗೆ ಬಲಿಯಾಗದೇ ಇರಬಹುದು. 

ಒಂದು ವೇಳೆ ಅಂತಹ ಯಾವುದೇ ವಂಚನೆ, ಬ್ಲ್ಯಾಕ್‍ಮೇಲ್, ಬೆದರಿಕೆಗಳಿಗೆ ಒಳಗಾದರೆ ತಕ್ಷಣ ಹತ್ತಿರದ ಪೊಲೀಸ್‍ಠಾಣೆ ಅಥವಾ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖುದ್ದಾಗಿ ಭೇಟಿ ಮಾಡಿ ಅಥವಾ ಇ-ಮೇಲ್, ವಾಟ್ಸ್‍ಪ್ ಮೂಲಕ ಮತ್ತು ಜಿಲ್ಲಾ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ತಕ್ಷಣ ದೂರು ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ದೂರು ನೀಡುವವರು ಬಯಸಿದರೆ ಅವರ ಮಾಹಿತಿಯನ್ನು ಗೌಪ್ಯವಾಗಿಟ್ಟು ತನಿಖೆ ಕೈಗೊಂಡು ಅಪರಾಧಿಗಳಿಗೆ ಸೂಕ್ತ ಕಾನೂನು ಕ್ರಮ ಜರುಗಿಸಿ ನ್ಯಾಯಾಲಯದಿಂದ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅಭಯ ನೀಡಿದ್ದಾರೆ.

ಆದ್ದರಿಂದ ಯಾವುದೇ ರೀತಿಯ ಬ್ಲ್ಯಾಕ್‍ಮೇಲ್, ಬೆದರಿಕೆಗಳಿಗೆ ಒಳಗಾಗುವವರು ಯಾವುದೇ ಹಿಂಜರಿಕೆ ಇಲ್ಲದೇ ಪೊಲೀಸ್ ಇಲಾಖೆಯ ಸಹಾಯ ಪಡೆದು ಇಂತಹ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸಹಕರಿಸಬೇಕು ಮತ್ತು ಪೊಲೀಸ್ ಇಲಾಖೆಯ ಜನಸ್ನೇಹಿ ಆಡಳಿತ ವ್ಯವಸ್ಥೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಕೃಷ್ಣಕಾಂತ ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *