ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆಯ ಕೇಸ್ ನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಈ ಹಿಂದಿನ ಆಪ್ತ ಕಾರ್ಯದರ್ಶಿಯಾಗಿದ್ದ ಸದ್ಯ ಗದಗ, ತಿಪಟೂರು ಹಾಗೂ ಬ್ಯಾಡಗಿ ಎಪಿಎಂಸಿ ಕಾರ್ಯದರ್ಶಿ ಯಾಗಿದ್ದ ಕೆ ಎ ಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನ ಸಿಬಿಐ ಅಧಿಕಾರಿಗಳು ಒಂದು ದಿನ ತಮ್ಮ ವಶಕ್ಕೆ ತೆಗೆದುಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಿದರು.
ಬಳಿಕ ಶುಕ್ರವಾರ ಸಂಜೆ ವೀಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಎದುರು ಹಾಜರು ಪಡಿಸಿದರು.
ನ್ಯಾಯಾಲಯ ಸೋಮು ನ್ಯಾಮಗೌಡ ಅವರನ್ನು ಧಾರವಾಡ ಜಿಲ್ಲೆಯ ಕೇಂದ್ರ ಕಾರಾಗೃಹಕ್ಕೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ನಿನ್ನೆ ಬೆಳಿಗ್ಗೆ ಗದಗ ಎಪಿಎಂಸಿ ವಸತಿ ನಿಲಯದಲ್ಲಿ ಬಂಧಿಸಿ ಧಾರವಾಡದ ಉಪನಗರ ಪೋಲಿಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು.
ಅವರೊಂದಿಗೆ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ವಿಜಯ ಕುಲಕರ್ಣಿ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ, ಜಿಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಮ್ ಟ್ರೇನರ್ ವಿವೇಕ ದಳವಾಯಿ, ವಿನಯ ಆಪ್ತ ಬಸವರಾಜ ಮುತ್ತಗಿ, ಯೋಗೀಶಗೌಡ ಪತ್ನಿ ಮಲ್ಲಮ್ಮ ಗೌಡರ ವಿಚಾರಣೆ ನಡೆಸಿದ್ದರು.
ಇಂದು ಶುಕ್ರವಾರ ಮತ್ತೆ ಜಿಮ್ ಟ್ರೇನರ್ ವಿವೇಕ ದಳವಾಯಿ, ವಿನಯ ಆಪ್ತ ಬಸವರಾಜ ಮುತ್ತಗಿ, ಯೋಗೀಶಗೌಡ ಪತ್ನಿ ಮಲ್ಲಮ್ಮ ಗೌಡರ, ವಿನಯ ಕುಲಕರ್ಣಿ ಸೋದರ ಸಂಬಂಧಿ ಕೆಂಪೇಗೌಡ ಪಾಟೀಲ ಅವರ ವಿಚಾರಣೆ ನಡೆಸಿದರು.
ಈಗಾಗಲೇ ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿ ಎಂಟು ತಿಂಗಳು ಕಳೆದು ಹೋಗಿದೆ.