ಅಪರಾಧ

ಧಾರವಾಡದ ತಡಕೋಡದಲ್ಲಿ ಸೋಯಾಬಿನ್ ಬಣಿವೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಹಾನಿ

ಧಾರವಾಡ prajakiran.com : ಹೊಲದಲ್ಲಿನ ಸೋಯಾಬಿನ್ ಬಣಿವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿಯಾದ ಘಟನೆ ತಾಲೂಕಿನ ತಡಕೋಡ ಗ್ರಾಮದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಗ್ರಾಮದ ಮಲ್ಲಪ್ಪ ಮಟಗೊಡ್ಲಿ ಎಂಬ ರೈತರ ಬಣಿವೆ ಬೆಂಕಿಗೆ ಆಹುತಿಯಾಗಿದೆ.

ಗ್ರಾಮದ ಸಮೀಪದ ಹೊಲದಲ್ಲಿ ಸಂಗ್ರಹಿಸಿಡಲಾಗಿದ್ದ ಬಣಿವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ.

ಇದರಿಂದ ಅಂದಾಜು ೧೦೦ ಚೀಲಗಳ ಸೋಯಾಬಿನ್ ಕಾಳು ಬೆಂಕಿಗಾಹುತಿಯಾಗಿದೆ.

ಗರಗ ಠಾಣೆಯ ಪಿಎಸ್‌ಐ ಕಿರಣ ಮೋಹಿತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಧಾರವಾಡದ ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *