*ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ*
*ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದಾಗ ಹೃದಯಾಘಾತದಿಂದ ಸಾವು*
*ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಕೆ.ಶಿವರಾಂ ಪುತ್ರಿ*
ಬೆಂಗಳೂರು ಪ್ರಜಾಕಿರಣ.ಕಾಮ್ : ವಿದೇಶ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.
ಸ್ಪಂದನಾ ಅವರ ಸಾವು ಕನ್ನಡ ಸಿನಿಮಾರಂಗದಲ್ಲಿ ಅಕ್ಷರಶಃ ಬರಸಿಡಿಲು ಬಡಿದಂತಾಗಿದೆ.
ವರನಟ ಡಾ. ರಾಜಕುಮಾರ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟು ಮಾಡಿದೆ.
ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ 2016 ರ ಅಗಸ್ಟ್ 26 ರಂದು ನಟ ವಿಜಯ ರಾಘವೇಂದ್ರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಸ್ಪಂದನಾ ಕೂಡ ಅಪೂರ್ವ ಸಿನಿಮಾದಲ್ಲಿ ಅತಿಥಿ ನಟರಾಗಿ ಅಭಿನಯಿಸಿದ್ದರು.
ಅವರು ಪುತ್ರ ಮೌರ್ಯ, ಪತಿ ವಿಜಯ ರಾಘವೇಂದ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.