ರಾಜ್ಯದಲ್ಲಿ ಪ್ರಪ್ರಥಮವಾಗಿ ಮಂಗಳೂರಿನಿಂದ ಬೆಂಗಳೂರಿಗೆ ‘ವಿಸ್ಟಾಡೋಮ್ ‘ ಬೋಗಿಗಳ ರೈಲು
ಮಂಗಳೂರು Prajakiran.com : ಮಂಗಳೂರು ಮತ್ತು ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲು ಸಂಚಾರಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿ, ಸಂಚಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ಅವರು, ಈ ಯೋಜನೆಗೆ ಅನುವು ಮಾಡಿಕೊಟ್ಟ ನಮ್ಮ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಈ ಮಾರ್ಗದಲ್ಲಿ ಸುಬ್ರಮಣ್ಯ ದೇವಸ್ಥಾನವಿದೆ. ಧಾರ್ಮಿಕ ಹಾಗೂ ಪ್ರಾಕೃತಿಕ ಅನುಭವಗಳು ಪ್ರವಾಸಿಗರಿಗೆ ಖುಷಿ ಕೊಡುತ್ತದೆ.
ಮಂಗಳೂರಿಗೆ 2 ಕೋಚ್ ಗಳನ್ನು ಕೊಟ್ಟಿದ್ದಾರೆ. ಇದರಲ್ಲಿ 40 ಆಸನಗಳಿವೆ. ದಿವ್ಯಾಂಗರಿಗೆ ಪ್ರತ್ಯೇಕವಾಗಿರುವ ವ್ಯವಸ್ಥೆ ಇದರಲ್ಲಿದೆ.
ಇಂತಹ ಯೋಜನೆಯನ್ನು ಸಾಕಾರಗೊಳಿಸಿದ ರೈಲ್ವೆ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಮ್ಮ ಸರ್ಕಾರ ಬಂದ ಮೇಲೆ ರೈಲ್ವೆಯ ಅಭಿವೃದ್ಧಿ ವೇಗವಾಗಿ ಸಾಗುತ್ತಿದೆ. ಮಂಗಳೂರು ರೈಲ್ವೆಯಲ್ಲಿ ಬದಲಾವಣೆಯನ್ನು ತರುವ ಪ್ರಯತ್ನಗಳು ಪ್ರತಿಫಲ ನೀಡುತ್ತಿದೆ.
ಮಂಗಳೂರು ರೈಲ್ವೆಗೆ ಕೇಂದ್ರದಿಂದ ಹೆಚ್ಚಿನ ಅನುದಾನವನ್ನು ಕೊಟ್ಟಿದ್ದಾರೆ. ವೇಗವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿಆರ್ ಎಂ ಕೊಠಾರಿ, ಕಾರ್ಪೋರೆಟ್ ಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.