ಧಾರವಾಡ prajakiran.com : ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಧಾರವಾಡದ ಲೈನ್ ಬಜಾರ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶ್ರೀರಾಮಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ಆದಷ್ಟು ಬೇಗ ಕರೋನಾ ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.
ರಾಜ್ಯಾದ್ಯಂತ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಅದರಂತೆ ಧಾರವಾಡ ಲೈನ್ ಬಜಾರ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಶ್ರೀರಾಮಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ ತಿಳಿಸಿದರು.
ಈ ಸಂದರ್ಭದಲ್ಲಿ ಕಲಾವಿದ ಮಂಜುನಾಥ ಹಿರೇಮಠ, ಉತ್ತರ ಕರ್ನಾಟಕ ಪ್ರಾಂತ ಸಂಚಾಲಕ ಈಶ್ವರಗೌಡ ಪಾಟೀಲ್, ಧಾರವಾಡ ಪ್ರಮುಖ ಮೈಲಾರ ಗುಡ್ಡಪ್ಪನವರ ಸೇರಿದಂತೆ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದರು.