ರಾಜ್ಯ

ಗಣಪತಿ ಸಮೇತ ಜೈಲಿಗೆ ಹಾಕಿ ಎಂದ ಪ್ರಮೋದ ಮುತಾಲಿಕ್

ಧಾರವಾಡ prajakiran.com :  ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡದಿದ್ದರೆ ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾನು ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ ಎಂದು ಶ್ರೀರಾಮಸೇನೆ ರಾಷ್ಟ್ರೀಯಅಧ್ಯಕ್ಷ ಪ್ರಮೋದ ಮುತಾಲಿಕ್ ಎಚ್ಚರಿಸಿದರು.

ಅವರು ಸೋಮವಾರ ಧಾರವಾಡದಲ್ಲಿ ಶ್ರೀ ರಾಮ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗಣಪತಿ ಮೂರ್ತಿ ತಯಾರಿಸುವ ಮೂಲಕ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಧಾರವಾಡದ ಡಿಸಿ ಕಚೇರಿಮುಂದೆ ಪ್ರತಿಭಟನೆ ವೇಳೆ ಗಣಪತಿ ಮೂರ್ತಿ ತಯಾರಿಸಿದ ಪ್ರಮೋದ್ ಮುತಾಲಿಕ್ ಗೆ ಕಲಾವಿದ ಮಂಜುನಾಥ ಹಿರೇಮಠ ಸಾಥ್ ನೀಡಿದರು.

ಸಾರ್ವಜನಿಕ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದಅವರು ಸಾರ್ವಜನಿಕ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡಿಯೇ ಸಿದ್ದ  ಎಂದು ಎಚ್ಚರಿಕೆ ನೀಡಿದರು.

ನಾವು ವೋಟ ಹಾಕಿ ರಾಜ್ಯದಲ್ಲಿ ಸರ್ಕಾರ ತಂದೇವಿ. ಗಣಪತಿ ಕೂಡಿಸಲು ಕೊಡೊಲ್ಲಾ ಅಂದ್ರೆ ಹೆಂಗೆ ಸರ್ಕಾರ ನಡೆಸುವರು ಹೊಟ್ಟೆಗೆ  ಏನು ತಿಂತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಸರಕಾರ ಈ ಹಿಂದೆ ಹೊರಡಿಸಿದ ಆದೇಶವನ್ನು ಪುನರ್ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರಕ್ಕೆ 24 ಗಂಟೆ ಗುಡುವು ಕೊಡತೇವಿ ಎಂದು ಗುಡುಗಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *