ರಾಜ್ಯ

ಗಣೇಶೋತ್ಸವ ಅವಕಾಶ ನೀಡದಿದ್ದರೆ ಉಲ್ಲಂಘನೆ

ಹುಬ್ಬಳ್ಳಿ prajakiran.com : ಹಿಂದುಗಳ ಪ್ರಮುಖ ಹಬ್ಬವಾದ ಗಣೇಶೋತ್ಸವವನ್ನು ಸಾರ್ವಜನಿಕ ಸ್ಥಳದಲ್ಲಿ ಆಚರಿಸಲು ಅವಕಾಶ ನೀಡದಿದ್ದರೆ, ಅದನ್ನು ಉಲ್ಲಂಘಿಸಬೇಕಾಗುತ್ತದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯಅಧ್ಯಕ್ಷ ಪ್ರಮೋದ ಮುತಾಲಿಕ್ ನೇರ ಎಚ್ಚರಿಕೆ ನೀಡಿದ್ದಾರೆ.

ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ಪರವಾನಿಗೆ ನೀಡಬೇಕು ಎಂದು ಒತ್ತಾಯಿಸಿ ಆ 17ರಂದು ರಾಜ್ಯಾದ್ಯಂತ ಶ್ರೀರಾಮಸೇನೆ ನೇತೃತ್ವದಲ್ಲಿ ಸಾರ್ವಜನಿಕ ಗಣೇಶ ಮಂಡಳಿ, ಮೂರ್ತಿತಯಾರಕರು ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಗಮನಸೆಳೆಯಲಾಗುವುದು ಎಂದರು.

ಲಾಕ್ ಡೌನ್ ತೆರವುಗೊಳಿಸಿ ಬಾರ್ ಆಂಡ್ ರೆಸ್ಟೋರೆಂಟ್ , ಮಾಲ್ ಗಳು, ಜಿಮ್ , ಸಾರಿಗೆ, ರೈಲು, ಹೋಟೆಲ್ ಸೇರಿದಂತೆ ಎಲ್ಲಾ ಬಗೆಯ ಮಾರುಕಟ್ಟೆಗೆ ಅವಕಾಶ ಕಲ್ಪಿಸಿದೆ.

ಆದರೆ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿರುವುದು ನೋವಿನ ಹಾಗೂ ಬಹಳ ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ನೆರೆ ಮಹಾರಾಷ್ಟ್ರದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ. ಅಲ್ಲದೆ, ರಾಜ್ಯ ಸರಕಾರ ಸೂಚಿಸುವ ಕೋವಿಡ್ ನಿಯಮಾವಳಿಗಳನ್ನು ಪಾಲಿಸುತ್ತೇವೆ. ಆದರೆ ಯಾವುದೇ ಕಾರಣಕ್ಕೂ ಅದನ್ನು ನಿರಾಕರಿಸಬಾರದು ಎಂದು ಆಗ್ರಹಿಸಿದರು.

ವರ್ಷವೀಡಿ ಹಗಲು ರಾತ್ರಿ ಎನ್ನದೆ ಗಣೇಶ ಮೂರ್ತಿಗಳ ತಯಾರಿಕೆಯನ್ನೇ ನಂಬಿ  ಜೀವನ ನಡೆಸುವ ಸಹಸ್ರಾರು ಕಲಾವಿದರ ಬಾಳು, ಗೋಳು ಹೇಳತೀರದಂತಾಗಿದೆ.

ಅದನ್ನು ಲಕ್ಷ್ಯದಲ್ಲಿಟ್ಟುಕೊಂಡು ರಾಜ್ಯ ಸರಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಪ್ರಮೋದ ಮುತಾಲಿಕ್  ಮನವಿ ಮಾಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *