ಬೆಂಗಳೂರು prajakiran.com : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ 25 ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದ್ದರೆ, 57 ಹೋಮ್ ಕ್ವಾರಂಟಿನ್ ಮಾಡಿರುವುದು ಪಾಲಕರಿಗೆ ಆತಂಕ ಮೂಡಿಸಿದೆ.
ಹಾಸನ, ಗದಗ, ಬಾಗಲಕೋಟೆ, ಬೆಂಗಳೂರಿನ ಹಲವು ವಿದ್ಯಾರ್ಥಿಗಳಿಗೆ ಮಹಾಮಾರಿ ಕರೋನಾ ಕಾಡುತ್ತಿದೆ.
ಇದಲ್ಲದೆ, ಹಲವಡೆ ಶಿಕ್ಷಕರು, ಭದ್ರತ್ರೆಗೆ ನಿಯೋಜನೆಗೊಂಡ ಪೊಲೀಸರಿಗೂ ಕ್ರೂರಿ ಕರೋನಾ ಹರಡಿರುವುದು ದೃಢಪಟ್ಟಿದೆ.
ಈ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಸುರೇಶಕುಮಾರ್ ಅವರು ಮುಂದೇನು ಎಂಬ ಬಗ್ಗೆ ತಜ್ಞರ ಸಮಿತಿಯಿಂದ ಸಲಹೆ ಕೇಳಿದ್ದಾರೆ.
ಸೋಂಕಿತ ವಿದ್ಯಾರ್ಥಿಗಳಿಗೆ ಸಕಾರಣದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.
ಈ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
ಅಲ್ಲದೆ, ಸೋಂಕಿತರು ಪತ್ತೆಯಾದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗಳನ್ನು ನಡೆಸುವ ಮತ್ತು ಸೋಂಕಿತರಿಗೆ ಯಾವ ರೀತಿ ಪರೀಕ್ಷೆ ನಡೆಸಬೇಕು ಎಂಬುದರ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಆರೋಗ್ಯ ಇಲಾಖೆ ಜೊತೆಗೆ ಸಮಾಲೋಚನೆ ನಡೆಸಿ, ಪರೀಕ್ಷೆ ಗೂ ಮುನ್ನವೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ವಿವರಿಸಿದ್ದಾರೆ.