ಬೆಂಗಳೂರು Prajakiran.com : ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ಇಂದು ನಡೆದ ಮಹತ್ವದ ಸಭೆಯಲ್ಲಿ ಜುಲೈ 19 ಮತ್ತು 22ಕ್ಕೆ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಲಕಿಸಿದ್ದಾರೆ.
ಈ ಕುರಿತು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಎಸ್ಎಸ್ಎಲ್ಸ ಪರೀಕ್ಷೆಯನ್ನು ಜುಲೈ 19 ಮತ್ತು 22ಕ್ಕೆ 10:30 1:30ರ ವರೆಗೆ ನಡೆಸುವುದಾಗಿ ಹೇಳಿದ್ದಾರೆ.
ಜೂನ್ 30ರಂದು ಹಾಲ್ ಟಿಕೇಟ್ನ್ನು ನೀಡಲಾಗುವುದು, ಇನ್ನೂ ಜುಲೈ 19ಕ್ಕೆ ಕೋರ್ ವಿಷಯಗಳ ಪರೀಕ್ಷೆ ನಡೆಯಲಿದ್ದು, 22ಕ್ಕೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದರು.
ಕೊಠಡಿ ಮೇಲ್ವಿಚಾರಕರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆಯನ್ನು ಪಡೆದಿರಬೇಕು ಹಾಗೂ ಒಂದು ಬೆಂಚಿಗೆ ಒಂದು ಮಗು ಮಾತ್ರ ಇರುವಂತೆ ಪರೀಕ್ಷೆ ಬರೆಯಬೇಕು.
ಅನಾರೋಗ್ಯಕ್ಕೆ ತುತ್ತಾದ ಮಕ್ಕಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕೊಎಲಾಗುವುದು ಹಾಗೂ ಪರೀಕ್ಷೆ ನಡೆಯುವ ದಿನದಂದು ಶಾಲೆಯ ಸುತ್ತ 200 ಮೀಟರ್ನಲ್ಲಿ ಸೆಕ್ಷನ್ 144 ಜಾರಿಯಲ್ಲಿರಲಿದೆ ಎಂದರು.
ಇನ್ನೂ ದ್ವೀತಿಯ ಪಿಯುಸಿ ಫಲಿತಾಂಶವನ್ನು ಜುಲೈ 2ನೇ ವಾರದಲ್ಲಿ ಪ್ರಕಟಿಸಲಾಗುವುದು. ಹಾಗೂ ಶಿಕ್ಷಕರ ವರ್ಗಾವಣೆ ಕಾರ್ಯವನ್ನು ಜುಲೈ ಅಂತ್ಯದಲ್ಲಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.