ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿರ್ಭಂಧಿತ ಪ್ರದೇಶ ಘೋಷಣೆ

ಧಾರವಾಡ prajakiran.com : ಜೂನ್ ೨೫ ರಿಂದ ಜುಲೈ ೪ ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯನ್ನು ಹೊರತುಪಡಿಸಿ) ಇರುವ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ-೧೯೭೩ರ ಕಲಂ ೧೪೪ ರನ್ವಯ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.

ಈ ಘೋಷಿತ ಆದೇಶವು ಜೂನ್ ೨೫ರಿಂದ ಜುಲೈ ೪ ರವರೆಗೆ ಪರೀಕ್ಷಾ ಸಮಯದಲ್ಲಿ ಜಾರಿಯಲ್ಲಿದ್ದು, ನಿರ್ಭಂಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಈ ಆದೇಶವು ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿ ಜೂನ್ ೧೬ ರಂದು ಜಿಲ್ಲಾಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದಾರೆ.



 ಝೆರಾಕ್ಸ್ ಕೇಂದ್ರಗಳ ನಿರ್ವಹಣೆಗೆ ನಿರ್ಭಂಧನೆ   

ಜೂನ್ ೨೫ ರಿಂದ ಜುಲೈ ೪ ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಸಮಯದಲ್ಲಿ ಪರೀಕ್ಷೆಯ ವೇಳಾಪಟ್ಟಿಗೆ ಅನುಸಾರವಾಗಿ ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯೊಳಗಿನ ಎಲ್ಲ ಝೆರಾಕ್ಸ್ ಕೇಂದ್ರಗಳು ಪರೀಕ್ಷಾ ಅವಧಿಯಲ್ಲಿ ಮಾತ್ರ ಕಾರ್ಯನಿರ್ವಹಿಸದಂತೆ ನಿರ್ಭಂಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ವೇಳಾ ಪತ್ರಿಕೆಗೆ ಅನುಗುಣವಾಗಿ ಆಯಾ ದಿವಸದ ಬೆಳಗಿನ ೧೦-೩೦ ಗಂಟೆಯಿಂದ     ೧-೩೦ ಗಂಟೆಯವರೆಗೆ ಮತ್ತು ಅಪರಾಹ್ನದ ೨ ಗಂಟೆಯಿಂದ ೫-೧೫ ಗಂಟೆಯವರೆಗೆ  ಪರೀಕ್ಷಾ ಸಮಯದಲ್ಲಿ ಮಾತ್ರ ನಿರ್ಭಂಧಿತ ಪ್ರದೇಶದ ಝೆರಾಕ್ಸ್ ಕೇಂದ್ರಗಳು ಕಾರ್ಯನಿರ್ವಹಿಸದಂತೆ ಬಂದ್ ಮಾಡಿಸಲು ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ಈ ಆದೇಶದಲ್ಲಿ ತಿಳಿಸಿದ್ದಾರೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *