ಶಿವಮೊಗ್ಗ prajakiran. com : ಶಿವಮೊಗ್ಗದ ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿದ ಪ್ರಕರಣ ನಡೆದಿದೆ.
ನಂದಿ ಸಿಲ್ಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್ ನ ತರಕಾರಿ ಮಾರುಕಟ್ಟೆಯ ಹತ್ತಿರ ಹೋಗುತ್ತಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು.
ಪ್ರೇಮ್ ಸಿಂಗ್ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ನದೀಮ್ ಬಿನ್ ಲೇಟ್ ನೌಶಾದ್ ಅಲಿ ಹಾಗೂ ಅಬ್ದುಲ್ ರೆಹಮಾನ್ ಬಿನ್ ಅಬ್ದುಲ್ ಲತೀಫ್ ನನ್ನು ಬಂಧಿಸಲಾಗಿದೆ.
ಸಿಎಂ ಪ್ರತಿಕ್ರಿಯೆ :
ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದರು.
ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.