ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ವಿಧಾನಸಭಾ ಕ್ಷೇತ್ರ-71ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಹೆಬ್ಬಳ್ಳಿ ಹಾಗೂ
ಲೋಕೂರನಲ್ಲಿ ಸಣ್ಣಪುಟ್ಟ ವಿಚಯಗಳಿಗಾಗಿ ದಾಂದಲೆ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ವಿಜಯೋತ್ಸವದ ವೇಳೆ ಕೆಲವರು ಉದ್ದೇಶಪೂರ್ವಕವಾಗಿ ಮನೆಗೆ ಪಠಾಕಿ ಉಗ್ಗಿ ಚಾಕು ಇರಿದ ಘಟನೆ ಧಾರವಾಡ ತಾಲೂಕಿನ ಲೋಕೂರನಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಭರತೇಶ ಗಾಳಿಗೆ ಚಾಕು ಇರಿಯಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು
ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಅದೇ ರೀತಿ ಹೆಬ್ಬಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ನೊಬ್ಬನ ಮನೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಉಗ್ಗಿ ಮಾತಿನ ಚಕಮಕಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.