ಧಾರವಾಡ prajakiran.com : ಧಾರವಾಡದಲ್ಲಿ ಹಾಡಹಗಲೇ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬುಧವಾರ ಸಂಜೆ ಮೆಹಬೂಬ್ ನಗರದಲ್ಲಿ ನಡೆದಿದೆ.
ಇಬ್ಬರ ನಡುವೆ ಹಣಕಾಸಿನ ವ್ಯವಹಾರಕ್ಕಾಗಿ ಈ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ. ಇದರಿಂದಾಗಿ ಧಾರವಾಡದ ಮೆಹಬೂಬ್ ನಗರ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.
ಮೆಹಬೂಬ್ ನಗರದ ಆಟೋ ಡ್ರೈವರ್ ಮಾಬುಲಿ ಹಿರೇಕುಂಬಿ ಎಂಬಾತನೇ ಮಾರಣಾಂತಿಕವಾಗಿ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಈತನನ್ನು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದವನನ್ನು ಮಾಬೂಲಿ ತೋಸಿವಾಲೆ ಎಂದು ಗುರುತಿಸಲಾಗಿದೆ.
ಈತನೇ ಹಣಕಾಸಿನ ವ್ಯವಹಾರದಿಂದ ಬೇಸತ್ತು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ಪ್ರಜಾಕಿರಣ.ಕಾಮ್ ಗೆ ಮೂಲಗಳು ತಿಳಿಸಿವೆ.
ಕೇಳಿ ಕೇಳಿ ಬೇಸರಗೊಂಡು ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.