ಅಪರಾಧ

ಧಾರವಾಡದ ನಡು ರಸ್ತೆಯಲ್ಲಿ ಮಟ ಮಟ ಮಧ್ಯಾಹ್ನ ‘ಚಾಕು’ ನಿಂದ ದಾಳಿ…!

ಧಾರವಾಡ prajakiran.com : ಮಟ ಮಟ ಮಧ್ಯಾಹ್ನ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ ಘಟನೆ ಶುಕ್ರವಾರ ಧಾರವಾಡದ ನಡು ರಸ್ತೆಯಲ್ಲಿ ನಡೆದಿದೆ.

ಧಾರವಾಡದ ಹಣ್ಣಿನ ಮಾರುಕಟ್ಟೆ ಯಲ್ಲಿ ಈ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.

ಗೌಸ್ ಎಂಬಾತನ ಉಪಟಳ ‌ತಾಳದೇ ಸುಭಾನ್ ಅಲಿಯಾಸ್ ಚಾಕು ಎಂಬಾತ ಗೌಸನ ತಲೆಗೆ ಕಲ್ಲಿನಿಂದ ಬಲವಾಗಿ ಹೊಡೆದಿದ್ದರಿಂದ ಗೌಸ್ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ.

ಇದನ್ನು ಕಂಡ ಮಾರುಕಟ್ಟೆಯಲ್ಲಿನ ಕೆಲ ಅಂಗಡಿಕಾರರು ತಮ್ಮ ಅಂಗಡಿಗಳಿಗೆ ಬೀಗ ಹಾಕಿಕೊಂಡು ನಮಗ್ಯಾಕೆ ಬೇಕಪ್ಪ ಊರ ಉಸಾಬರಿ ಅಂತಾ ಮನೆ ಕಡೆ ಹೋಗಿದ್ದಾರೆ.

ಘಟನೆ ಹಿನ್ನೆಲೆ: ಹಣ್ಣು ಮಾರಾಟ ಮಾಡುತ್ತಿದ್ದ ಸುಭಾನ್ ಅಲಿಯಾಸ್ ಚಾಕು ಎಂಬಾತನೊಂದಿಗೆ ಗೌಸ್ ಜಗಳ ತೆಗೆದಿದ್ದಾನೆ.

ಕೆಲ ಸಮಯದವರೆಗೂ ಸಹಿಸಿಕೊಂಡ ಸುಭಾನ್, ಗೌಸ್ ನ ಕಿರುಕುಳ ಹೆಚ್ಚಾದಾಗ ಅನಿವಾರ್ಯವಾಗಿ ಗೌಸನ ಮೇಲೆ ದಾಳಿ ಮಾಡಿದ್ದಾನೆ.

ಈ ಸಂದರ್ಭದಲ್ಲಿ ಇಬ್ಬರೂ ಕೈ ಕೈ ಮಿಲಾಯಿಸಿದ್ದಾರೆ. ಸುಭಾನ್, ಗೌಸನ ತಲೆಗೆ ಕಲ್ಲಿನಿಂದ ಬಲವಾಗಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾನೆ.

ಸದ್ಯ ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಪತ್ತೆಗಾಗಿ ಹುಡುಕಾಟ ಕೂಡ ನಡೆಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *